ಬೆಳಗಾವಿ: ತಿದ್ದುಪಡಿ ಮಾಡಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ಮತ್ತು ದೆಹಲಿಯ ಗಡಿಗಳಲ್ಲಿ ಹೋರಾಟನಿರತ ರೈತರಿಗೆ ಬೆಂಬಲ ವ್ಯಕ್ತಪಡಿಸಲು ದೆಹಲಿಯ ಸಂಯುಕ್ತ ಕಿಸಾನ್ ಮೋರ್ಚಾ ಕರೆಯ ಮೇರೆಗೆ ನಗರದ ರೈಲು ನಿಲ್ದಾಣದಲ್ಲಿ ರೈಲು ತಡೆ ಚಳವಳಿ ನಡೆಸಲು ಮುಂದಾದ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.
ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಬಂದ ರೈತರನ್ನು ಪೊಲೀಸರು ಗೇಟ್ನಲ್ಲೇ ತಡೆದರು. ಈ ವೇಳೆ ಪೊಲೀಸರು ಮತ್ತು ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಯಿತು. ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನಸೆಳೆಯುತ್ತೇವೆ. ಅವಕಾಶ ಮಾಡಿಕೊಡಬೇಕು ಎಂದು ಮುಖಂಡರು ಕೋರಿದರು. ಆದರೆ, ಪೊಲೀಸರು ಅವಕಾಶ ಕೊಡಲಿಲ್ಲ. ಅವರ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.
ನೇತೃತ್ವ ವಹಿಸಿದ್ದ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ, ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರಾದ ಚೂನಪ್ಪ ಪೂಜಾರಿ, ಪ್ರಕಾಶ ನಾಯ್ಕ, ಜಯಶ್ರೀ ಗುರಣ್ಣವರ, ಅಪ್ಪಾಸಾಹೇಬ ದೇಸಾಯಿ ಸೇರಿದಂತೆ 15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು.
https://youtu.be/rEYmoGHhjWs
Laxmi News 24×7