Breaking News
Home / ರಾಜ್ಯ / ದಲಿತ ಯುವತಿ ಮೇಲೆ ಅತ್ಯಾಚಾರ ಎಸಗಿ ಘಟಪ್ರಭಾ ನದಿಗೆ ಎಸೆದ ದುಷ್ಕರ್ಮಿಗಳು

ದಲಿತ ಯುವತಿ ಮೇಲೆ ಅತ್ಯಾಚಾರ ಎಸಗಿ ಘಟಪ್ರಭಾ ನದಿಗೆ ಎಸೆದ ದುಷ್ಕರ್ಮಿಗಳು

Spread the love

ಬಾಗಲಕೋಟೆ, ಫೆಬ್ರವರಿ 18: ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿ, ಜಿಲ್ಲೆಯ ಘಟಪ್ರಭಾ ನದಿಯ ಕಲಾದಗಿ ಸೇತುವೆ ಬಳಿ ಶವ ಎಸೆದಿರುವ ಬಗ್ಗೆ ದೂರು ದಾಖಲಾಗಿದೆ.

ಅಂಕಲಗಿ ಸೇತುವೆ ಬಳಿ ಯುವತಿಯ ಮೃತ ದೇಹ ಪತ್ತೆಯಾಗಿದ್ದು, ಹನೀಪ್ ಎಂಬ ಯುವಕನೇ ಕೃತ್ಯ ಎಸಗಿದ್ದಾನೆ ಎಂದು ಕಲಾದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನರ್ಸಿಂಗ್ ಮುಗಿಸಿರುವ ಯುವತಿಯು ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಳು. ಹನೀಪ್ ಸಹ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ಕೂಲಿ‌ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.

ಆಸ್ಪತ್ರೆಗೆ ಹೋದ ಯುವತಿ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ನಾಪತ್ತೆ ಆಗಿರುವ ಬಗ್ಗೆ ಬಾಗಲಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಳಿಕ ಕಲಾದಗಿಯಿಂದ ಕಾತರಕಿ ಗ್ರಾಮಕ್ಕೆ ಹೋಗುವ ಅಂಕಲಗಿ ಸೇತುವೆ ಬಳಿ ಯುವತಿಯ ಶವ ಪತ್ತೆ ಆಗಿದೆ.

ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಕೊಲೆ ಆಗಿರುವ ಯುವತಿಯ ಸಹೋದರರ ಮಾವ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.

ಆರ್.ಬಿ.ತಿಮ್ಮಾಪೂರ ಖಂಡನೆ

ಮುಧೋಳ ತಾಲೂಕಿನ ವಜ್ರಮಟ್ಟಿ ಗ್ರಾಮದ ದಲಿತ ಸಮುದಾಯದ ಯುವತಿ ಮೇಲೆ ಅತ್ಯಾಚಾರವೆಸಗಿ ಬಳಿಕ ಹತ್ಯೆ ಮಾಡಿ, ಘಟಪ್ರಭಾ ನದಿಗೆ ಎಸೆದಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಆರ್.ಬಿ ತಿಮ್ಮಾಪೂರ ತಿಳಿಸಿದ್ದಾರೆ.


Spread the love

About Laxminews 24x7

Check Also

ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ

Spread the love ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ