Breaking News
Home / ರಾಜ್ಯ / ದನ ಮೇಯಿಸುತ್ತಿದ್ದ ರೈತ ಮಹಿಳೆಯೊಬ್ಬರ ಮೇಲೆ ಕಾಡುಹಂದಿ ದಾಳಿ

ದನ ಮೇಯಿಸುತ್ತಿದ್ದ ರೈತ ಮಹಿಳೆಯೊಬ್ಬರ ಮೇಲೆ ಕಾಡುಹಂದಿ ದಾಳಿ

Spread the love

ಖಾನಾಪುರ: ತಾಲೂಕಿನ ಭೀಮಗಡ ವನ್ಯಧಾಮದ ಗವ್ವಾಳಿ ಗ್ರಾಮದ ಹೊರವಲಯದಲ್ಲಿ ದನ ಮೇಯಿಸುತ್ತಿದ್ದ ರೈತ ಮಹಿಳೆಯೊಬ್ಬರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ಗುರುವಾರ ಮಧ್ಯಾಹ್ನ ಜರುಗಿದೆ.

ಗವ್ವಾಳಿ ಗ್ರಾಮದ ಸಾವಿತ್ರಿ ಬಾಬು ಗಾವಡಾ (೭೬) ಅವರ ಮೇಲೆ ಹಿಂದಿನಿಂದ ದಾಳಿ ನಡೆಸಿದ ಕಾಡುಹಂದಿ ಅವರ ಮೊಣಕಾಲು ಮತ್ತು ಸೊಂಟದ ಭಾಗವನ್ನು ತನ್ನ ಹರಿತವಾದ ಮುಳ್ಳಿನಿಂದ ತಿವಿದು ಗಾಯಗೊಳಿಸಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ತೆರಳಿದ ಭೀಮಗಡ ಉಪ ವಲಯ ಅರಣ್ಯ ಅಧಿಕಾರಿ ಮಲ್ಲೇಶಪ್ಪ ನಂದೆಪ್ಪಗೋಳ ಹಾಗೂ ಸಿಬ್ಬಂದಿ ಇಲಾಖೆಯ ವಾಹನದಲ್ಲಿ ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಸಾವಿತ್ರಿ ಅವರಿಗೆ ಚಿಕಿತ್ಸೆ ನೀಡಿ ಅವರ ಗಾಯಗಳಿಗೆ ಹೊಲಿಗೆ ಹಾಕಲಾಗಿದ್ದು, ಅವರು ಸಧ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಚಿಕಿತ್ಸೆ ನೀಡಿರುವ ವೈದ್ಯ ಡಾ.ನಾರಾಯಣ ವಡ್ಡೀನ ತಿಳಿಸಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ