Breaking News

ಕೇರಳ, ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳ: ಗಡಿಯಲ್ಲಿ ನಿಗಾವಹಿಸುವಂತೆ ಡಿಸಿಎಂ ಸೂಚನೆ

Spread the love

ಬೆಳಗಾವಿ: ಮಹರಾಷ್ಟ್ರ, ಕೇರಳ ರಾಜ್ಯದಲ್ಲಿ ಹೊಸ ಪ್ರಭೇದದ ಕೋವಿಡ್ ಪತ್ತೆ ಹಿನ್ನೆಲೆಯಲ್ಲಿ ಗಡಿಯಲ್ಲಿ
ನಿಗಾ ವಹಿಸುವಂತೆ ಸೂಚಿಸಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು.

ಸಾರ್ವಜನಿಕರು ಹೆಚ್ಚಿನ ಜಾಗೃತಿ ವಹಿಸಿ ಮಾಸ್ಕ್ ಧರಿಸಬೇಕು. ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಈಗಾಗಲೇ ಅಂತರರಾಜ್ಯ ಸಾರಿಗೆ ಆರಂಭವಾಗಿದೆ. ಈ ಮೊದಲಿನಂತೆ ಜಾಗೃತಿ ವಹಿಸಲು ಸೂಚನೆ ನೀಡಲಾಗಿದೆ ಎಂದರು.

ಇನ್ನು ಪಂಚಮಸಾಲಿ ಸಮುದಾಯ 2ಎಗೆ ಸೇರಿಸಬೇಕು ಎಂಬ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸಿ, ಸಮಾಜದ ಹೋರಾಟಕ್ಕೆ ನನ್ನ ಬೆಂಬಲವಿದೆ. ಸುವರ್ಣ ವಿಧಾನಸೌಧದಲ್ಲಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಪವಾಸ ಸತ್ಯಾಗ್ರಹ ನಡೆಸಿದ ಸಂದರ್ಭದಲ್ಲಿ ನಾನೇ ಬೆಂಬಲ ನೀಡಿದ್ದೆ. ಸಚಿವ ಸಂಪುಟ ಸಭೆಯಲ್ಲಿ 2 ಎ ಮೀಸಲಾತಿಗೆ ವಿರೋಧ ವ್ಯಕ್ತವಾಗಿದೆ ಎಂಬುವುದು ವದಂತಿಯಷ್ಟೇ ಎಂದು ಹೇಳಿದ್ರು.


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆ ವಿಭಜನೆಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯ

Spread the loveಬೆಳಗಾವಿ: 2025ರ ಡಿಸೆಂಬರ್‌ 31ರೊಳಗೆ ಕ್ರಮವಹಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡದೇ ಹೋದರೆ ಈ ಸರ್ಕಾರದ ಅವಧಿಯಲ್ಲಿ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ