Breaking News
Home / ಜಿಲ್ಲೆ / ಭೀಕರ ಅಪಘಾತ : ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ-ಕಾರು

ಭೀಕರ ಅಪಘಾತ : ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ-ಕಾರು

Spread the love

ದಾವಣಗೆರೆ : ಟಿಪ್ಪರ್-ಲಾರಿಗೆ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಲಾರಿಗೂ ತಗಲು ಸುಟ್ಟು ಕರಕಲಾದ ಘಟನೆ ನಡೆದಿದೆ.

ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಾಗುತ್ತಿದ್ದ ಕಾರು, ದಾವಣಗೆರೆ ಕಡೆಯಿಂದ ಬರುತ್ತಿದ್ದಂತ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯಿಂದಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡು, ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದಂತವರು ಕಾರಿನಿಂದ ಕೇಳಗೆ ಇಳಿದುಕೊಂಡಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು, ಬೆಂಕಿ ನಂದಿಸಿದ್ದಾರೆ. ದಾವಣಗೆರೆ ದಕ್ಷಿಣ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ