Breaking News

ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ

Spread the love

ರಾಯಚೂರು: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಚಾಲಕ ಸಜೀವ ದಹನವಾದ ಘಟನೆ ತಾಲೂಕಿನ ಕಲ್ಮಲ ಸಮೀಪ ಸಂಭವಿಸಿದೆ.

ಮೃತ ಕಾರು ಚಾಲಕನನ್ನು ಮಲ್ಲಟ ಗ್ರಾಮದ ಸದಾನಂದಗೌಡ ಮಾಲೀಪಾಟೀಲ (60) ಎಂದು ಗುರುತಿಸಲಾಗಿದೆ.

ಮಲ್ಲಟದಿಂದ ರಾಯಚೂರು ಕಡೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡದಿದೆ. ಇದರಿಂದ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಕ್ಷಣದಲ್ಲೇ ಹೊತ್ತಿ ಉರಿದಿದೆ. ಕಾರು ಲಾಕ್ ಆಗಿರುವ ಕಾರಣ ಚಾಲಕ ಹೊರಬರಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಗ್ರಾಮದ ಹೊರವಲಯದಲ್ಲಿ ಘಟನೆ ಸಂಭವಿಸಿದ ಹಿನ್ನೆಲಯಲ್ಲಿ ತಕ್ಷಣ ಬೆಂಕಿ ನಂದಿಸಲು ಸಾರ್ವಜನಿಕರಿಗೆ ಸಾಧ್ಯವಾಗಿಲ್ಲ.

ಅಗ್ನಿ ಶಾಮಕದಳ ಬರುವ ವೇಳೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ ಬಳಿಕ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ