Breaking News
Home / ಜಿಲ್ಲೆ / ಅಧಿಕಾರಿಗಳ ಜೊತೆ ನವದೆಹಲಿಗೆ ತೆರಳಿದ ರಮೇಶ್ ಸಾಹುಕಾರ್…

ಅಧಿಕಾರಿಗಳ ಜೊತೆ ನವದೆಹಲಿಗೆ ತೆರಳಿದ ರಮೇಶ್ ಸಾಹುಕಾರ್…

Spread the love

ಬೆಳಗಾವಿ-ಕರ್ನಾಟಕ ರಾಜ್ಯದ ಹಲವು ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ‌, ನವದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿ ಚರ್ಚಿಸಲಿದ್ದಾರೆ.

ಆ ಸಭೆಗೂ ಮುನ್ನ ನವದೆಹಲಿಯ ಕರ್ನಾಟಕ ಭವನದಲ್ಲಿ ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಸಲಹೆಗಾರರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಜಲಸಂಪನ್ಮೂಲ ಸಚಿವರೊಂದಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್‌ ಕುಮಾರ್ ಸೇರಿದಂತೆ‌ ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ