Breaking News

ಅಧಿಕಾರಿಗಳ ಜೊತೆ ನವದೆಹಲಿಗೆ ತೆರಳಿದ ರಮೇಶ್ ಸಾಹುಕಾರ್…

Spread the love

ಬೆಳಗಾವಿ-ಕರ್ನಾಟಕ ರಾಜ್ಯದ ಹಲವು ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ‌, ನವದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿ ಚರ್ಚಿಸಲಿದ್ದಾರೆ.

ಆ ಸಭೆಗೂ ಮುನ್ನ ನವದೆಹಲಿಯ ಕರ್ನಾಟಕ ಭವನದಲ್ಲಿ ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಸಲಹೆಗಾರರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಜಲಸಂಪನ್ಮೂಲ ಸಚಿವರೊಂದಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್‌ ಕುಮಾರ್ ಸೇರಿದಂತೆ‌ ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.


Spread the love

About Laxminews 24x7

Check Also

ರಬಕವಿಯಲ್ಲಿ ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು ಹಿಡಿದು ಸಂಚರಿಸಿದ ಕಳ್ಳರು

Spread the love ಬಾಗಲಕೋಟೆ: ರಬಕವಿಯಲ್ಲಿ  ಮುಖಕ್ಕೆ ಮಾಸ್ಕ್ ಕೈಯಲ್ಲಿ ಕೋಲು ಹಿಡಿದು 6 ಜನ ಕಳ್ಳರು ಸಂಚರಿಸಿದ್ದಾರೆ. ಜ.19ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ