Breaking News

ನಿರುದ್ಯೋಗಿ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ‘ಮಹತ್ವದ ಮಾಹಿತಿ’: ನಗದು ಪರಿಹಾರ ಪಡೆಯಲು ತಪ್ಪದೇ ಹೀಗೆ ಮಾಡಿ

Spread the love

ಬೆಂಗಳೂರು: ಕೇಂದ್ರ ಸರ್ಕಾರವು ಕಾರ್ಮಿಕರ ವಿಮಾ ನಿಗಮದ ಮೂಲಕ ಅಟಲ್ ವಿಮಿತ್ ವ್ಯಕ್ತಿ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲ ಉದ್ದೇಶವು ನೊಂದಾಯಿತ ವಿಮಾ ಕಾರ್ಮಿಕರ ಹಲವಾರು ಕಾರಣಗಳಿಂದ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿರುವುದರಿಂದ ಅವರ ನಿರುದ್ಯೋಗ ಅವಧಿಗೆ ನಗದು ಪರಿಹಾರ ಒದಗಿಸುವ ಉದ್ದೇಶವಾಗಿರುತ್ತದೆ.

ಈ ಯೋಜನೆಯು ಜೂನ್ -2021ರ ಅಂತ್ಯದವರೆಗೆ ಜಾರಿಯಲ್ಲಿರುತ್ತದೆ. ನಿಗಮದಲ್ಲಿ ನೋಂಣಿಯಾದ ಕನಿಷ್ಠ 2 ವರ್ಷಗಳ ಅವಧಿಯಲ್ಲಿ ವಂತಿಗೆಯನ್ನು ಪಾವತಿಸಿ ನಿರುದ್ಯೋಗಿಯಾದ ದಿನಾಂಕದ ಪೂರ್ವ 2 ವರ್ಷಗಳಲ್ಲಿ ಕನಿಷ್ಠ 78 ದಿನಗಳ ವಂತಿಗೆ ಪಾವತಿಸಿರಬೇಕು. ಕೇಂದ್ರ ಸರ್ಕಾರವು ಕಾರ್ಮಿಕರ ರಾಜ್ಯ ವಿಮಾ ನಿಗಮದ ಮೂಲಕ ಅಟಲ್ ಬಿಮಿತ್‌ ವ್ಯಕ್ತಿ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲ ಉದ್ದೇಶವು ವಿಮಾದಾರರಾಗಿ ನೋಂದಾಯಿತ ಕಾರ್ಮಿಕರು ಹಲವಾರು ಕಾರಣಗಳಿಂದ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾದಾಗ ಅವರಿಗೆ ನಿರುದ್ಯೋಗ ಅವಧಿಗೆ ನಗದು ಪರಿಹಾರ ಒದಗಿಸುವ ಉದ್ದೇಶವನ್ನು ಹೊಂದಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಯಾ ಜಿಲ್ಲೆಯ ಕಾರ್ಮಿಕ ಅಧಿಕಾರಿಗಳ ಕಚೇರಿ, ಗಳನ್ನು ಸಂಪರ್ಕಿಸಬಹುದಾಗಿದ್ದು, ಹಾಗೂ ವೆಬ್‍ಸೈಟ್ www.esic.nic.in ನ್ನು ಸಂಪರ್ಕಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ