Breaking News

ಬೆಂಗಳೂರು: ಗೌರಿ ಲಂಕೇಶ್ ಹಂತಕರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

Spread the love

ಬೆಂಗಳೂರು, ಫೆ. 21. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 6 ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಪ‍್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತಿರಸ್ಕರಿಸಿದೆ.

ಆರ್‌.ಆರ್‌ ನಗರದ ಐಡಿಯಲ್ ಹೋಮ್ಸ್ ಟೌನ್‌ ಶಿಪ್‌ ನಲ್ಲಿರುವ ಮನೆಯ ಎದುರೇ 2017ರ ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ವಿಶೇಷ ತನಿಖಾ ದಳದ ಅಧಿಕಾರಿಗಳು, 16 ಆರೋಪಿಗಳನ್ನು ಬಂಧಿಸಿದ್ದರು. ಆರೋಪಿಗಳ ಪೈಕಿ ಅಮಿತ್ ದೇಗ್ವೇಕರ್, ಭರತ್ ಕುರ್ನೆ, ಸುಧನ್ವಾ ಗೊಂಧಲೇಕರ್, ಸುಜಿತ್‌ ಕುಮಾರ್ ಅಲಿಯಾಸ್ ಪ್ರವೀಣ್, ಮನೋಹರ್ ಯಡವೆ ಹಾಗೂ ರಾಜೇಶ್ ಬಂಗೇರ್‌ ಎಂಬವರು ಜಾಮೀನು ಕೋರಿ ತಮ್ಮ ವಕೀಲರ ಮೂಲಕ 2020 ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರು ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಶನಿವಾರ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಶಾಲಾ ಮಕ್ಕಳ ಆತ್ಮಹತ್ಯೆ ತಡೆಗೆ ನೀತಿ ಜಾರಿ – ಮಹದೇವಪ್ಪ

Spread the loveಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ