Breaking News
Home / ರಾಜಕೀಯ / ಯತ್ನಾಳ್ ಕಾಂಗ್ರೆಸ್ ನ `ಬಿ’ ಟೀಂ : ನಿರಾಣಿ, ಪಾಟೀಲ್ ವಾಗ್ದಾಳಿ

ಯತ್ನಾಳ್ ಕಾಂಗ್ರೆಸ್ ನ `ಬಿ’ ಟೀಂ : ನಿರಾಣಿ, ಪಾಟೀಲ್ ವಾಗ್ದಾಳಿ

Spread the love

ಬೆಂಗಳೂರು,ಫೆ.22- ಪಂಚಮಸಾಲಿ ಹೋರಾಟ ವನ್ನು ಕೆಲವರು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಸಮಾಜದ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಸಚಿವರಾದ ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್, ಮುಗಿಬಿದ್ದರು. ಪಂಚಮಸಾಲಿ ಐತಿಹಾಸಿಕ ಹೋರಾಟ, ಸ್ವಾರ್ಥಕ್ಕೆ ಬಳಕೆಯಾಗುತ್ತಿದ್ದು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್‍ನ ಬಿ ಟೀಮ್‍ನಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿಂದು ಮಾತನಾಡಿದ ಸಚಿವರುಗಳು, 2ಎ ಮೀಸಲಾತಿಗಾಗಿ ಆಗ್ರಹಿಸಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ ನಡೆದಿದೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಅರ್ಥಪೂರ್ಣ ಬೃಹತ್ ಸಮಾವೇಶದಲ್ಲಿ ಲಕ್ಷಾಂತರ ಜನರು ಭಾಗವಹಿಸಿದ್ದರು. ಆದರೆ ಕೆಲವರು ಇದನ್ನು ದುರ್ಬಳಕೆ ಮಾಡಿಕೊಂಡು ಸ್ವಾರ್ಥ ಸಾಧನೆಗಾಗಿ ಸಮಾಜದ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ