Breaking News

3000 ರೂ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ

Spread the love

ಬೆಳಗಾವಿ: ಚಿಕ್ಕೋಡಿಯ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ನೌಕರ ಚೇತನ್ ಹಂಜಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಅಥಣಿಯ ಬಾಳಪ್ಪ ಸಿದ್ದಪ್ಪ ಬನ್ನಟ್ಟಿ ಎಂಬುವವರಿಗೆ ಅಥಣಿ ತಾಲೂಕಿನ ಶಿವನೂರ ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ನೇದ್ದರ ಹೊಸ ಬೈಲಾ ಅನುಮೋದನೆ ಮಾಡಿ ಸ್ವೀಕೃತಿ ನೀಡಲು ಚೇತನ್ 3000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಬಾಳಪ್ಪ ಎಂಬುವವರು ಎಸಿಬಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಳಗಾವಿ ಉತರ ವಲಯ ಎಸಿಬಿ ಪೊಲೀಸ್ ಅಧಿಕ್ಷಕ ಬಿ. ಎಸ್. ನೇಮಗೌಡ ಅವರ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ 3000 ರೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಹಕಾರ ಸಂಘಡ ನೌಕರ ಚೇತನ್ ಎಸಿಬಿ ಬಲೆಗೆ ಬಿದ್ದಿದ್ದಾರೆ.


Spread the love

About Laxminews 24x7

Check Also

ಪರಪುರುಷನೊಂದಿಗೆ ಲವ್ವಿಡವ್ವಿ – ಹಾಸಿಗೆ ಹಿಡಿದ ಪತಿ ಕೊಂದು ಹೃದಯಾಘಾತ ಅಂತ ನಾಟಕವಾಡಿದ್ದ ಹೈನಾತಿ

Spread the loveಬೆಂಗಳೂರು: ಪ್ರೀತಿ ಎಂಬುದು ಮಾಯೆ.. ಈ ಪ್ರೀತಿಗೆ ಕಣ್ಣಿಲ್ಲ ಅಂತಾರೆ ನಿಜ, ಆದ್ರೆ ಕೆಲವೊಮ್ಮೆ ಪ್ರೀತಿಗೆ ಹೃದಯವೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ