Breaking News

ಸರ್ಕಾರ ಭರವಸೆ ನೀಡಿದ್ದ ಒಂದೇ ಒಂದು ಬೇಡಿಕೆಯನ್ನು ಈವರೆಗೂ ಈಡೇರಿಸಿಲ್ಲ; ಸಾರಿಗೆ ನೌಕರರ ಒಕ್ಕೂಟ

Spread the love

ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳು ಈಡೇರಿಸಿಲ್ಲ. 14 ಡಿಸೆಂಬರ್ 2020 ರಿಂದ ಈವರೆಗೂ ಬೇಡಿಕೆ ಈಡೇರಿಲ್ಲ. 75 ದಿನ ಕಳೆದರೂ ಸರ್ಕಾರ ಸಾರಿಗೆ ನೌಕರರ ಒಂದೇ ಒಂದು ಬೇಡಿಕೆ ಈಡೇರಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಸಾರಿಗೆ ನೌಕರರ ಒಕ್ಕೂಟದಿಂದ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು, ಕಳೆದ ಡಿಸೆಂಬರ್​ನಲ್ಲಿ ಸಾರಿಗೆ ನೌಕರರು ನಡೆಸಿದ ಧರಣಿ ವೇಳೆ ಸರ್ಕಾರ ನೌಕರರ ಬೇಡಿಕೆ ಹೊರತುಪಡಿಸಿ ಉಳಿದ ಬೇಡಿಕೆ ಈಡೇರಿಸುತ್ತೇವೆ ಎಂದು ಸರ್ಕಾರ ಹೇಳಿತ್ತು. ಆದರೆ ನಾವು ಕೇಳಿದ ಪ್ರಮುಖ ಬೇಡಿಕೆಗಳನ್ನು ಇದುವರೆಗೆ ಈಡೇರಿಸಿಲ್ಲ ಎಂದು ಆರೋಪಿಸಿದರು.

ನೆರೆಯ ಆಂಧ್ರದಲ್ಲಿ ಸಾರಿಗೆ ನೌಕರರ ಮೂಲ ವೇತನ ಹೆಚ್ಚಿದೆ. ಆದರೆ ನಮ್ಮಲ್ಲಿ ಮೂಲವೇತನವೂ ಶೇ.80ರಷ್ಟು ಕಡಿಮೆಯಿದೆ. ಆರನೇ ವೇತನ ಆಯೋಗ ಸಾರಿಗೆ ನೌಕರರಿಗೂ ವಿಸ್ತರಣೆ ಬೇಡಿಕೆ ಈಡೇರಿಲ್ಲ. ಅವೈಜ್ಞಾನಿಕ ವೇತನ ಪರಿಷ್ಕರಣೆ ಅಗ್ರಿಮೆಂಟ್ ಬಿಟ್ಟುಬಿಡಿ. ವೇತನ ಆಯೋಗ ಶಿಫಾರಸ್ಸು ಮಾಡಿ ಮಾಡಿ ಎಂದು ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು. ಹಾಗೂ ಬಜೆಟ್ ನಲ್ಲಿ ಸಾರಿಗೆಗೆ ಹೆಚ್ಷು ಒತ್ತು ನೀಡುವಂತೆ ಒತ್ತಾಯಿಸಿದರು.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ