ಹೊಸದಿಲ್ಲಿ: ಸಾಮಾಜಿಕ ಜಾಲತಾಣಗಳು, ಒಟಿಟಿ ಪ್ಲಾಟ್ ಫಾರ್ಮ್, ಡಿಜಿಟಲ್ ಮಾಧ್ಯಮಗಳಿಗೆ ಗುರುವಾರ ಸರ್ಕಾರ ಹೊಸ ಮಾರ್ಗಸೂಚಿಯೊಂದನ್ನು ಪ್ರಕಟಿಸಿದೆ.
ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿಗಳನ್ನು ಹಂಚಿಕೊಂಡರು. ಹೊಸ ಮಾರ್ಗಸೂಚಿಗಳು ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಸಮೂಹ ಸಂವಹನ ಮಾಧ್ಯಮಗಳ ವಿಷಯದ ಮೇಲೆ ನಿಗಾ ಇಡುತ್ತವೆ ಎಂದರು.
ದೇಶದಲ್ಲಿ ಸಾಮಾಜಿಕ ಮಾಧ್ಯಮಗಳ ದುರುಪಯೋಗವನ್ನು ಎತ್ತಿ ತೋರಿಸಿದ ಸಚಿವರು ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಮಾಧ್ಯಮ ವೇದಿಕೆಗಳು ಬಳಕೆದಾರರ ಉತ್ತಮ ಪರಿಶೀಲನೆಗಾಗಿ ಯಾಂತ್ರಿಕ ವ್ಯವಸ್ಥೆಯನ್ನು ಪರಿಚಯಿಸಬೇಕೆಂದು ಸರ್ಕಾರ ಬಯಸಿದೆ ಎಂದು ಹೇಳಿದರು.