Breaking News
Home / Uncategorized / ಸಚಿವ ರಮೇಶ್ ಜಾರಕಿಹೊಳಿ, ಬಸವರಾಜ ಬೊಮ್ಮಾಯಿ‌ ಬೆಳಗ್ಗೆ 11 ಗಂಟೆಗೆ

ಸಚಿವ ರಮೇಶ್ ಜಾರಕಿಹೊಳಿ, ಬಸವರಾಜ ಬೊಮ್ಮಾಯಿ‌ ಬೆಳಗ್ಗೆ 11 ಗಂಟೆಗೆ

Spread the love

ಬೆಂಗಳೂರು – ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ  (ಫೆ.26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ.

ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ವಹಿಸಲಿದ್ದು, ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದ ಅಡ್ವೊಕೇಟ್ ಜನರಲ್ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲರು, ಸರ್ಕಾರದ ಅಪರ‌ ಮುಖ್ಯ ಕಾರ್ಯದರ್ಶಿ, ಇಲಾಖೆಯ ಕಾರ್ಯದರ್ಶಿ, ಅಂತರ ರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಿತಿ ಸದಸ್ಯರು, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಜಲಸಂಪನ್ಮೂಲ ಮತ್ತು ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಲೋಕಸಭೆ: 4,524 ಮತಗಟ್ಟೆ, 24 ಸಾವಿರ ಸಿಬ್ಬಂದಿ ಸನ್ನದ್ಧ

Spread the loveಬೆಳಗಾವಿ: ‘ಜಿಲ್ಲೆಯಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ