Breaking News

ಮಹಿಳೆಯನ್ನು ಕಟ್ಟಿಹಾಕಿ ಹಾಡಹಗಲೇ ದರೋಡೆಗೆ ಯತ್ನ: ಸಿನಿಮೀಯಾ ರೀತಿಯಲ್ಲಿ ನಡೆಯಿತು ಚೇಸಿಂಗ್

Spread the love

ಚಿಕ್ಕಮಗಳೂರು: ಇಬ್ಬರು ದರೋಡೆಕೋರರಿಂದ ಹಾಡಹಗಲೇ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ನಗರ ಎಐಟಿ ಸರ್ಕಲ್ ನಲ್ಲಿ ನಡೆದಿದೆ.

ಎಐಟಿ ಸರ್ಕಲ್ ನಲ್ಲಿರುವ ಸಿಡಿಎ ಮಾಜಿ ಅಧ್ಯಕ್ಷ ಚಂದ್ರೇಗೌಡ ಎಂಬವರ ಮನೆ ಬಳಿ ಪಲ್ಸರ್ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಯುವಕರು ತಲೆಗೆ ಹೆಲ್ಮೆಟ್ ಧರಿಸಿ ಕೈಯಲ್ಲಿ ಚಾಕು ಹಿಡಿದು ಮನೆಯೊಳಗೆ ಪ್ರವೇಶಿಸಿದ್ದಾರೆ.

ಮನೆಯಲ್ಲಿ ಚಂದ್ರೇಗೌಡ ಪತ್ನಿ ಒಬ್ಬರೇ ಇದ್ದಿದ್ದು, ಅವರ ಕೈ ಬಾಯಿಗೆ ವೇಲ್ ನಿಂದ ಕಟ್ಟಿ ದರೋಡೆಗೆ ಯತ್ನಿಸಿದ್ದಾರೆ.

ಈ ವೇಳೆ ಮಹಿಳೆಯ ಮಗ ಬಂದು ನೋಡಿ ಕರೆದಿದ್ದಾನೆ. ಒಳಗಿನಿಂದ ಅಮ್ಮನ ಧ್ವನಿ ಕೇಳದಿದ್ದಾಗ ಕಿಟಕಿಯಲ್ಲಿ ಇಣುಕಿ ನೋಡಿದ್ದಾನೆ. ಆಗ ತನ್ನ ತಾಯಿಯನ್ನು ಕಟ್ಟಿಹಾಕಿರುವುದನ್ನು ಕಂಡು ಕಿರುಚಾಡಿದ್ದಾನೆ. ಆಗ ಒಳಗಿದ್ದ ದರೋಡೆಕೋರರಿಬ್ಬರು ಹೊರಗೆ ಓಡಿ ಬಂದಿದ್ದಾರೆ.

ಈ ವೇಳೆ ಸಾರ್ವಜನಿಕರು ಇಬ್ಬರು ದರೋಡೆಕೋರರನ್ನು ಹಿಡಿಯಲು ಯತ್ನಿಸಿದ್ದಾರೆ. ಆದರೆ ಚಾಕು ತೋರಿಸಿದ ಖದೀಮರು ಸಾರ್ವಜನಿಕರು ನೋಡನೋಡುತ್ತಲೇ ಓಡಿಹೋಗಿದ್ದಾರೆ. ದರೋಡೆಕೋರರು ಬೈಕ್ ಹತ್ತಿ ಪರಾರಿಯಾಗಲು ಯತ್ನಿಸುತ್ತಿದ್ದ ವೇಳ ಸಾರ್ವಜನಿಕರು ಕೂಗಾಡಿದ್ದರಿಂದ ಅಲ್ಲೇ ರಸ್ತೆಯಲ್ಲಿ ಬರುತ್ತಿದ್ದ ಅಗ್ನಿಶಾಮಕ ವಾಹನದ ಚಾಲಕ ವಾಹನವನ್ನು ಢಿಕ್ಕಿ ಹೊಡೆಸಿ ಅವರನ್ನು ಕೆಳಗೆ ಬೀಳಿಸಿದ್ದಾನೆ.

ಸಾರ್ವಜನಿಕರು ಇಬ್ಬರ ಮೇಲೂ ಕಲ್ಲು ತೂರಾಟ ನಡೆಸಿದ್ದರಿಂದ ದರೋಡೆಕೋರರಿಬ್ಬರು ಸರ್ಕಲ್ ಬಳಿಯ ಕಲ್ಯಾಣ ನಗರದತ್ತ ಓಡಿದ್ದಾರೆ.

 

ಆರೋಪಿಗಳು ಪಾರಾರಿಯಾಗುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದರೋಡೆ ಪ್ರಕರಣ ಸಂಬಂಧ ದಂಟರಮಕ್ಕಿ ಬಡಾವಣೆಯ ಸಚಿನ್ ಮತ್ತು ಮೋಹನ್ ಎಂಬ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.

 

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ