Breaking News

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

Spread the love

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಖಾಲಿಯಾಗಿದ್ದ ಅನುದಾನಿತ ಪದವಿ ಪೂರ್ವ ಕಾಲೇಜುಗಳ 173 ಉಪನ್ಯಾಸಕರು ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 257 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ.

2015 ರ ಡಿಸೆಂಬರ್ 31ಕ್ಕೆ ನಿವೃತ್ತಿ, ಮರಣ, ರಾಜೀನಾಮೆ ಮತ್ತಿತರ ಕಾರಣಗಳಿಂದಾಗಿ ಈ ಹುದ್ದೆಗಳು ಖಾಲಿಯಾಗಿದ್ದು ಆದರೆ ಭರ್ತಿಯಾಗಿರಲಿಲ್ಲ. ಉಪನ್ಯಾಸಕರ ನೇಮಕಾತಿಗೆ ಅನುಮೋದನೆ ನೀಡಲಾಗಿತ್ತಾದರೂ ಬಳಿಕ ಪ್ರಕ್ರಿಯೆ ಸ್ಥಗಿತಗೊಂಡಿತ್ತು.

ಇನ್ನು ಶಿಕ್ಷಕರ ಹುದ್ದೆಗಳ ಭರ್ತಿಗೂ ಈ ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿತ್ತಾದರೂ ಇದಕ್ಕೆ ಆರ್ಥಿಕ ಇಲಾಖೆಯ ಅನುಮೋದನೆ ಸಿಕ್ಕಿರಲಿಲ್ಲ. ಇದೀಗ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಪ್ರಯತ್ನದಿಂದಾಗಿ ಅನುಮೋದನೆ ನೀಡಲಾಗಿದ್ದು, 2021 – 22 ನೇ ಶೈಕ್ಷಣಿಕ ವರ್ಷ ಆರಂಭವಾದ ಬಳಿಕ ನೇಮಕಾತಿಗೆ ಆದೇಶ ನೀಡುವಂತೆ ಆರ್ಥಿಕ ಇಲಾಖೆ ಷರತ್ತು ವಿಧಿಸಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ