Breaking News
Home / ರಾಜ್ಯ / ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

Spread the love

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಖಾಲಿಯಾಗಿದ್ದ ಅನುದಾನಿತ ಪದವಿ ಪೂರ್ವ ಕಾಲೇಜುಗಳ 173 ಉಪನ್ಯಾಸಕರು ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 257 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ.

2015 ರ ಡಿಸೆಂಬರ್ 31ಕ್ಕೆ ನಿವೃತ್ತಿ, ಮರಣ, ರಾಜೀನಾಮೆ ಮತ್ತಿತರ ಕಾರಣಗಳಿಂದಾಗಿ ಈ ಹುದ್ದೆಗಳು ಖಾಲಿಯಾಗಿದ್ದು ಆದರೆ ಭರ್ತಿಯಾಗಿರಲಿಲ್ಲ. ಉಪನ್ಯಾಸಕರ ನೇಮಕಾತಿಗೆ ಅನುಮೋದನೆ ನೀಡಲಾಗಿತ್ತಾದರೂ ಬಳಿಕ ಪ್ರಕ್ರಿಯೆ ಸ್ಥಗಿತಗೊಂಡಿತ್ತು.

ಇನ್ನು ಶಿಕ್ಷಕರ ಹುದ್ದೆಗಳ ಭರ್ತಿಗೂ ಈ ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿತ್ತಾದರೂ ಇದಕ್ಕೆ ಆರ್ಥಿಕ ಇಲಾಖೆಯ ಅನುಮೋದನೆ ಸಿಕ್ಕಿರಲಿಲ್ಲ. ಇದೀಗ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಪ್ರಯತ್ನದಿಂದಾಗಿ ಅನುಮೋದನೆ ನೀಡಲಾಗಿದ್ದು, 2021 – 22 ನೇ ಶೈಕ್ಷಣಿಕ ವರ್ಷ ಆರಂಭವಾದ ಬಳಿಕ ನೇಮಕಾತಿಗೆ ಆದೇಶ ನೀಡುವಂತೆ ಆರ್ಥಿಕ ಇಲಾಖೆ ಷರತ್ತು ವಿಧಿಸಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ