Breaking News
Home / Uncategorized / 15 ದಿನದಲ್ಲಿ ಹುಲಿ, ಚಿರತೆ ಸಾಫಾರಿಗೂ ಅವಕಾಶ: ಶಾಸಕ ಸತೀಶ ಜಾರಕಿಹೊಳಿ

15 ದಿನದಲ್ಲಿ ಹುಲಿ, ಚಿರತೆ ಸಾಫಾರಿಗೂ ಅವಕಾಶ: ಶಾಸಕ ಸತೀಶ ಜಾರಕಿಹೊಳಿ

Spread the love

 

ಬೆಳಗಾವಿ: ಮೂರು ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ  ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಿಂದ  ಪ್ರವಾಸೋದ್ಯಮ ಇಲಾಖೆ ಮಹತ್ವ ಬರಲಿದೆ   ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮೈಸೂರು ಮಾದರಿಯಲ್ಲಿ ಬೆಳಗಾವಿಯ ಮೃಗಾಲಯಕ್ಕೆ ಒತ್ತು ನೀಡಲಾಗುವುದು. ಇದರಿಂದ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯಗಳ ಸಂಪರ್ಕಕೊಂಡಿಯಾಗಲಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಜನತೆ ಮೈಸೂರಿಗೆ ಪ್ರಾಣಿ ವೀಕ್ಷಣೆಗೆ ಹೋಗುವುದು ತಪ್ಪಲಿದೆ ಎಂದು ತಿಳಿಸಿದರು.


ಮೊದಲ ಹಂತದಲ್ಲಿ ಎರಡು ವರ್ಷದಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ಮೃಗಾಲಯ ಅಭುವೃದ್ದಿಗೊಳಿಸಲಾಗಿದೆ. ಈಗಾಗಲೇ ಮೂರು ಸಿಂಹಗಳನ್ನು ತರಲಾಗಿದೆ. ಚಿರತೆ, ಹುಲಿ ಸೇರಿ ಅನೇಕ ಪ್ರಾಣಿಗಳು ಆಗಮಿಸಲಿವೆ. ಇನ್ನು ಎರಡುವಾರದಲ್ಲಿ  ಹುಲಿ ಸಫಾರಿಗೆ ಅವಕಾಶ ಮಾಡಿಕೊಡಲಾಗುತ್ತಿದೆ‌ ಎಂದರು.

ಮೃಗಾಲಯಕ್ಕೆ  ನೀರನ ಸಮಸ್ಯೆ ನೀಗಿಸಲು, ಮಾರ್ಕಂಡೇಯ ನದಿ ಮೂಲಕ ನರೇಗಾ ಯೋಜನೆಯಡಿ ಎರಡು ಕರೆ ನಿರ್ಮಿಸಲಾಗುತ್ತಿದೆ ಎಂದೂ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಸಫಾರಿಗೆ ಅನೂಕುಲವಾಗುವ ವಾಹನಗಳ ಪೂರೈಕೆಗೆ ಬೇಡಿಕೆ ಇಡಲಾಗುವುದು.

ಸಿಸಿಎಫ್  ಬಸವರಾಜ್  ಪಾಟೀಲ್ ಮಾತನಾಡಿ, ಪ್ರಾಣಿಗಳ ದತ್ತು ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಝೂ ಆಪ್ ಮೂಲಕ ಸಾರ್ವಜನರಿಕರು ಪ್ರಾಣಿಗಳ ದತ್ತು ಪಡೆಯಬಹುದಾಗಿದೆ. ಹುಲಿ, ಸಿಂಹಗಳ ದತ್ತು ಪಡೆಯಲು ಒಂದು ವರ್ಷಕ್ಕೆ ೧ ಲಕ್ಷ ರೂ. ಉಳಿದಂತೆ  ಇತರ ಪ್ರಾಣಿ ಪಕ್ಷಿ ಪ್ರಾಣಿಗಳಿಗೆ ಏಳುವರೆ ಸಾವಿರ ರೂ. ನಿಗದಿ ಪಡಿಸಲಾಗವುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಾಟಾಂಬಳೆ,  ಜಿಪಂ ಸದಸ್ಯ ಸಿದ್ದು ಸುಣಗಾರ, ಅರಣ್ಯ ಇಲಾಖೆ ಸಿಬ್ಬಂದಿ  ಮುಂತಾದವರು ಇದ್ದರು.


Spread the love

About Laxminews 24x7

Check Also

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್‌

Spread the loveಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ