Breaking News

ಸಚಿವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರು ಯಾರು, ಆ ವ್ಯಕ್ತಿಯನ್ನು ಪತ್ತೆ ಮಾಡಬೇಕೆಂದು ಸರ್ಕಾರ ಸೂಚನೆ

Spread the love

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ವಿಚಾರ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿಡಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಸಂತ್ರಸ್ತೆಯ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ, ಇನ್ನೊಂದು ಕಡೆ ಪೊಲೀಸರು ರಮೇಶ್ ಜಾರಕಿಹೊಳಿ ವಿಡಿಯೋ ಹಿಂದೆ ಬಿದ್ದಿದ್ದಾರೆ.

ಸಚಿವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರು ಯಾರು, ಆ ವ್ಯಕ್ತಿಯನ್ನು ಪತ್ತೆ ಮಾಡಬೇಕೆಂದು ಸರ್ಕಾರ ಸೂಚನೆ ನೀಡಿದೆ.

ಸದ್ಯ ವೈರಲ್ ಆಗಿರುವ ವಿಡಿಯೋ ಮೂಲ ಪತ್ತೆಗಾಗಿ ಹುಡುಕಾಟ ನಡೆಯುತ್ತಿದ್ದು, ಮೂಲಗಳ ಪ್ರಕಾರ ಖಾಸಗಿ ವೆಬ್ ಸೈಟ್ ನಲ್ಲಿ ರಷ್ಯಾದಿಂದ ವಿಡಿಯೋ ಅಪ್ ಲೋಡ್ ಮಾಡಿದೆ ಎನ್ನಲಾಗಿದ್ದು, ವಿಡಿಯೋ ಅಪ್ ಲೋಡ್ ಮಾಡಿದವರನ್ನು ಪತ್ತೆ ಹಚ್ಚಲು ಪೊಲೀಸರು ಹುಡುಕಾಟದ ಬೇಟೆ ಆರಂಭಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ