Breaking News

ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹5 ಕೋಟಿ ಡೀಲ್‌ ನಡೆದಿದೆ:.ಕುಮಾರಸ್ವಾಮಿ ಆರೋಪ

Spread the love

ಮೈಸೂರು: ‘ನನಗೆ ಲಭಿಸಿರುವ ಮಾಹಿತಿ ಪ್ರಕಾರ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹5 ಕೋಟಿ ಡೀಲ್‌ ನಡೆದಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.

‘ಈ ಪ್ರಕರಣದ ಹಿಂದೆ ದೊಡ್ಡವರ ಕೈವಾಡವಿದೆ. ಸಂತ್ರಸ್ತೆ ಎಲ್ಲಿದ್ದಾಳೆ ಎಂಬುದನ್ನು ಹುಡುಕುವ ಬದಲು, ದೂರು ನೀಡಿದ ದಿನೇಶ್‌ ಕಲ್ಲಹಳ್ಳಿಯನ್ನು ಬಂಧಿಸಬೇಕು. ಇನ್ನಷ್ಟು ಸಿ.ಡಿಗಳಿವೆ ಎಂದು ಹೇಳುವ ಆತನನ್ನು ವಿಚಾರಣೆಗೆ ಒಳಪಡಿಸಿದರೆ ಇಡೀ ಪ್ರಕರಣದ ಸತ್ಯಾಂಶ ಹೊರಬರಲಿದೆ’ ಎಂದು ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮದವರಿಗೆ ತಿಳಿಸಿದರು.

‘ಸಿ.ಡಿ. ಮುಂದಿಟ್ಟು ಮೂರು ತಿಂಗಳ ಹಿಂದೆಯೇ ದುಡ್ಡಿನ ವ್ಯವಹಾರ ನಡೆದಿದೆ. ದಿನೇಶ್‌ ಒಂದು ತಂಡವನ್ನು ಕಟ್ಟಿಕೊಂಡು ದುಡ್ಡು ಮಾಡುತ್ತಿದ್ದಾನೆ. ಆತನ ಬಳಿ ಸಿ.ಡಿ ಎಲ್ಲಿಂದ ಬಂತು ಎಂಬುದರ ತನಿಖೆಯಾಗಲಿ’ ಎಂದು ಆಗ್ರಹಿಸಿದರು.

‘ನಾನು ಈ ಪ್ರಕರಣ ನೋಡಿ ಖುಷಿ ಪಡುವವನಲ್ಲ. ಇಂತಹ ಬೆಳವಣಿಗೆಗಳಿಂದ ಸಮಾಜದಲ್ಲಿ ಹೇಸಿಗೆ ಹುಟ್ಟಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಆ ಸಚಿವನನ್ನು ರಾಜೀನಾಮೆ ಕೊಡಿಸಬೇಕೆಂಬ ಅವರ ಉದ್ದೇಶ ಈಡೇರಿದೆ. ಇಂತಹ ವಿಚಾರದಲ್ಲಿ ಸುಮ್ಮನೆ ಕಲ್ಲು ಹೊಡೆಯಬಾರದು’ ಎಂದರು.

‘ರಾಜಕಾರಣಿಗಳ ಸಿಡಿ ಇದೆ ಎನ್ನುವವರನ್ನು ಮೊದಲು ಒದ್ದು ಒಳಗೆ ಹಾಕಬೇಕು. ಅಂತವರನ್ನು ಬಂಧಿಸಿ ಅವರ ಬಳಿ ಇರುವ ಸಿ.ಡಿಗಳನ್ನು ಸರ್ಕಾರವೇ ಜನರ ಮುಂದೆ ಬಿಡುಗಡೆ ಮಾಡಲಿ. ಸಿ.ಡಿ ಹೆಸರಿನಲ್ಲಿ ನಡೆಯುವ ಬ್ಲ್ಯಾಕ್‌ಮೇಲ್‌ಗಳು ನಿಲ್ಲಬೇಕು ಎಂಬುದು ನನ್ನ ಉದ್ದೇಶ’ ಎಂದು ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ