Breaking News

ಯುವರತ್ನ ಕ್ರೇಜ್: ‘ಇದು ಜಸ್ಟ್ ಬಿಗಿನಿಂಗ್, ಮುಂದೆ ನೀವೇ ನೋಡ್ತಿರಲ್ಲ’

Spread the love

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ಏಪ್ರಿಲ್ 1 ರಂದು ಬಿಡುಗಡೆಯಾಗುತ್ತಿದೆ. ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ರಿಲೀಸ್ ಆಗುತ್ತಿದೆ.

ಯುವರತ್ನನ ಎಂಟ್ರಿಗೆ ನಾಲ್ಕು ವಾರ ಮಾತ್ರ ಬಾಕಿಯಿದ್ದು, ಅಪ್ಪು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ಯುವರತ್ನ ಸದ್ಯದಲ್ಲೇ ಪ್ರಿ-ರಿಲೀಸ್ ಕಾರ್ಯಕ್ರಮ ಆಯೋಜನೆಯಾಗುತ್ತಿದೆ.

 

ರಿಲೀಸ್‌ಗೆ ಒಂದು ತಿಂಗಳ ಮುಂಚೆಯೇ ಅಭಿಮಾನಿಗಳು ಜಾತ್ರೆ ಮಾಡ್ತಿದ್ದಾರೆ. ಅಪ್ಪು ಅವರ ಕಟೌಟ್‌ಗೆ ದುಡ್ಡಿನ ಮಾಲೆ ಹಾಕಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪೋಸ್ಟರ್‌ಗೆ ಸಂತೋಷ್ ಆನಂದ್ ರಾಮ್ ಸಹ ಖುಷಿ ವ್ಯಕ್ತಪಡಿಸಿದ್ದಾರೆ.

ಯುವರತ್ನ ಸಿನಿಮಾದ ಕನ್ನಡ ಹಾಗೂ ತೆಲುಗು ವರ್ಷನ್ ವಿತರಣೆ ಹಕ್ಕು ಈಗಾಗಲೇ ಮಾರಾಟವಾಗಿದೆ. ಆಂಧ್ರ-ತೆಲಂಗಾಣ, ಕರ್ನಾಟಕ, ಭಾರತದ ಇತರೆ ರಾಜ್ಯಗಳು ಹಾಗೂ ವಿದೇಶದಲ್ಲೂ ಯುವರತ್ನ ಸಿನಿಮಾ ರಿಲೀಸ್ ಮಾಡಲಾಗುತ್ತಿದೆ.

ಹೊಂಬಾಳೆ ಫಿಲಂಸ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗಿದ್ದು, ಎಸ್ ತಮನ್ ಸಂಗೀತ ನೀಡಿದ್ದಾರೆ. ಪುನೀತ್ ಜೊತೆ ಧನಂಜಯ್, ವಸಿಷ್ಠ ಸಿಂಹ, ಸಯೇಶಾ ಸೈಗಲ್, ಶರತ್ ಕುಮಾರ್ ಸೇರಿದಂತೆ ಹಲವರು ನಟಿಸಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ