Breaking News

ಪಾಲಿಕೆ ಎದುರು ಭಗವಾ ಧ್ವಜ ಹಾರಿಸಲು ಯತ್ನ,ಎಂಈಎಸ್ ಕಾರ್ಯಕರ್ತೆಯರ ವಶಕ್ಕೆ

Spread the love

ಬೆಳಗಾವಿ- ಮಹಾನಗರ ಪಾಲಿಕೆಯ ಎದರು ಭಗವಾ ಧ್ವಜ ಹಾರಿಸಲು ಯತ್ನಿಸಿದ ಐವರು ಮಹಿಳಾ ಕಾರ್ಯಕರ್ತೆಯರನ್ನು ಪೋಲೀಸರು ವಶಕ್ಕೆ ಪಡೆದಿದಿದ್ದಾರೆ.

 

 

ಬೆಳಗಾವಿ ಮಹಾನಗರ ಪಾಲಿಕೆಯ ಎದರು ಕನ್ನಡಿಗರು ಕನ್ನಡ ಧ್ವಜ ಹಾರಿಸಿದ್ದನ್ನು ವಿರೋಧಿಸಿ,ಎಂಈಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಬೆಳಗಾವಿಯ ಕಾಲೇಜು ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿರುವಾಗ,ಇನ್ನೊಂದೆಡೆ ಮಹಿಳಾ ಕಾರ್ಯಕರ್ತೆಯರು ಪಾಲಿಕೆ ಎದರು ಭಗವಾ ಧ್ವಜ ಹಾರಿಸುವ ವಿಫಲ ಯತ್ನ ನಡೆಸಿದ್ದಾರೆ.

ಸುಮಾರು ಐದು ಜನ ಮಹಿಳಾ ಕಾರ್ಯಕರ್ತೆ ಯರು ಘೋಷಣೆ ಕೂಗುತ್ತ ಪಾಲಿಕೆಯತ್ತ ಧಾವಿಸುತ್ತಿರುವಾಗ ಪೋಲೀಸರು ಅವರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

ಇತ್ತ ಕಾಲೇಜು ರಸ್ತೆಯಲ್ಲಿ ಎಂಈಎಸ್ ಮತ್ತು ಶಿವಸೇನೆಯ ಕಾರ್ಯಕರ್ತರು ಕನ್ನಡ ಧ್ವಜ ತೆರವು ಮಾಡಿ ಇಲ್ಲವಾದಲ್ಲಿ ಪಾಲಿಕೆ ಎದುರು ಭಗವಾ ಧ್ವಜ ಹಾರಿಸಿ ಎಂದು ಪ್ರತಿಭಟನೆ ನಡೆಸಿ,ಜಿಲ್ಲಾಧಿಕಾರಗಳಿಗೆ ಮನವಿ ಅರ್ಪಿಸಿದ್ದಾರೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ