Breaking News
Home / ರಾಜ್ಯ / ರೈತರು ಪ್ರತಿಭಟನೆ ಮಾಡುತ್ತಿರುವ ಸಿಂಘುವಿನಲ್ಲಿ ಗುಂಡಿನ ದಾಳಿ

ರೈತರು ಪ್ರತಿಭಟನೆ ಮಾಡುತ್ತಿರುವ ಸಿಂಘುವಿನಲ್ಲಿ ಗುಂಡಿನ ದಾಳಿ

Spread the love

ದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಮತ್ತು ಹರಿಯಾಣ ಗಡಿ ಪ್ರದೇಶ ಸಿಂಘುವಿನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ರಾತ್ರಿ(ಭಾನುವಾರ) ಗುಂಡಿನ ದಾಳಿ ನಡೆದಿದೆ.

ಅಪರಿಚಿತ ನಾಲ್ವರು ವ್ಯಕ್ತಿಗಳು ಕಾರಿನಲ್ಲಿ ಬಂದು ಗುಂಡು ಹಾರಿದ್ದಾರೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ರೈತರು ಸಾಮೂಹಿಕವಾಗಿ ಊಟ ಮಾಡುತ್ತಿದ್ದ ವೇಳೆ ಬಿಳಿ ಬಣ್ಣ ಆಡಿ ಕಾರಿನಲ್ಲಿ ಬಂದ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಕಾರು ಚತ್ತೀಸ್ ಘಡದ ನಂಬರನ್ನು ಹೊಂದಿತ್ತು ಎಂದು ಹೇಳಲಾಗಿದೆ.

ಈ ಬಗ್ಗೆ ರೈತರು ಪೊಲೀಸರಿಗೆ ದೂರು ನೀಡಿದ್ದು, ಗುಂಡು ಹಾರಿಸಿದ ವ್ಯಕ್ತಿಗಳು ಪಂಜಾಬ್ ಮೂಲದವರೆಂದು ಶಂಕಿಸಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ