Breaking News

ರೈತರು ಪ್ರತಿಭಟನೆ ಮಾಡುತ್ತಿರುವ ಸಿಂಘುವಿನಲ್ಲಿ ಗುಂಡಿನ ದಾಳಿ

Spread the love

ದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಮತ್ತು ಹರಿಯಾಣ ಗಡಿ ಪ್ರದೇಶ ಸಿಂಘುವಿನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ರಾತ್ರಿ(ಭಾನುವಾರ) ಗುಂಡಿನ ದಾಳಿ ನಡೆದಿದೆ.

ಅಪರಿಚಿತ ನಾಲ್ವರು ವ್ಯಕ್ತಿಗಳು ಕಾರಿನಲ್ಲಿ ಬಂದು ಗುಂಡು ಹಾರಿದ್ದಾರೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ರೈತರು ಸಾಮೂಹಿಕವಾಗಿ ಊಟ ಮಾಡುತ್ತಿದ್ದ ವೇಳೆ ಬಿಳಿ ಬಣ್ಣ ಆಡಿ ಕಾರಿನಲ್ಲಿ ಬಂದ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಕಾರು ಚತ್ತೀಸ್ ಘಡದ ನಂಬರನ್ನು ಹೊಂದಿತ್ತು ಎಂದು ಹೇಳಲಾಗಿದೆ.

ಈ ಬಗ್ಗೆ ರೈತರು ಪೊಲೀಸರಿಗೆ ದೂರು ನೀಡಿದ್ದು, ಗುಂಡು ಹಾರಿಸಿದ ವ್ಯಕ್ತಿಗಳು ಪಂಜಾಬ್ ಮೂಲದವರೆಂದು ಶಂಕಿಸಲಾಗಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ