ದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಮತ್ತು ಹರಿಯಾಣ ಗಡಿ ಪ್ರದೇಶ ಸಿಂಘುವಿನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ರಾತ್ರಿ(ಭಾನುವಾರ) ಗುಂಡಿನ ದಾಳಿ ನಡೆದಿದೆ.
ಅಪರಿಚಿತ ನಾಲ್ವರು ವ್ಯಕ್ತಿಗಳು ಕಾರಿನಲ್ಲಿ ಬಂದು ಗುಂಡು ಹಾರಿದ್ದಾರೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
ರೈತರು ಸಾಮೂಹಿಕವಾಗಿ ಊಟ ಮಾಡುತ್ತಿದ್ದ ವೇಳೆ ಬಿಳಿ ಬಣ್ಣ ಆಡಿ ಕಾರಿನಲ್ಲಿ ಬಂದ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಕಾರು ಚತ್ತೀಸ್ ಘಡದ ನಂಬರನ್ನು ಹೊಂದಿತ್ತು ಎಂದು ಹೇಳಲಾಗಿದೆ.
ಈ ಬಗ್ಗೆ ರೈತರು ಪೊಲೀಸರಿಗೆ ದೂರು ನೀಡಿದ್ದು, ಗುಂಡು ಹಾರಿಸಿದ ವ್ಯಕ್ತಿಗಳು ಪಂಜಾಬ್ ಮೂಲದವರೆಂದು ಶಂಕಿಸಲಾಗಿದೆ.