Breaking News

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ.
ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ. ಮಾ.9 ರಿಂದ ಮಾ.24 ರವರೆಗೆ ಒಟ್ಟು 15 ದಿನಗಳವರೆಗೆ ಸುಮಾರು 6.80 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಗೋಕಾಕ, ಮೂಡಲಗಿ, ರಾಯಬಾಗ, ಮುಧೋಳ, ಬೀಳಗಿ, ಜಮಖಂಡಿ ತಾಲೂಕುಗಳ ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಅನಾವಶ್ಯಕವಾಗಿ ನೀರನ್ನು ಪೋಲು ಮಾಡಬಾರದು. ಕೃಷಿ ಜಮೀನುಗಳಿಗೆ ಅನುಕೂಲವಾಗಲು ಹಿಡಕಲ್ ಜಲಾಶಯದಿಂದ ಎಲ್ಲ ಕಾಲುವೆಗಳಿಗೆ ನೀರು ಹರಿಸಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ