Breaking News
Home / ರಾಜ್ಯ / ಮಂಗಳವಾರ ಬೆಳಗ್ಗೆ 9.30ಕ್ಕೆ ರಮೇಶ ಜಾರಕಿಹೊಳಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಮಂಗಳವಾರ ಬೆಳಗ್ಗೆ 9.30ಕ್ಕೆ ರಮೇಶ ಜಾರಕಿಹೊಳಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

Spread the love

 

ಮಾ.2ರಂದು ರಮೇಶ ಜಾರಕಿಹೊಳಿ ಯುವತಿಯೊಂದಿಗೆ ರಾಸಲೀಲೆ ಮಾಡುತ್ತಿರುವ ವಿಡಿಯೋ ಬಹಿರಂಗವಾಗಿ ಭಾರಿ ಸುದ್ದಿಯಾಗಿತ್ತು. ಈ ಕುರಿತು ಸಾಮಾಜಿಕ ಕಾರ್ಯಕರ್ತ ದಿನೇಶ ಕಲ್ಲಳ್ಳಿ ಪೊಲೀಸ್ ದೂರನ್ನು ಸಹ ದಾಖಲಿಸಿದ್ದರು. ಯುವತಿಗೆ ಕೆಲಸ ಕೊಡಿಸುವುದಾಗಿ ಹೇಳಿ ಲೈಂಗಿಕ ಶೋಷಣೆ ಮಾಡಲಾಗಿದೆ ಎಂದು ದೂರಲಾಗಿತ್ತು.

ಆದರೆ ಇದು ನಕಲಿ ಸಿಡಿ ಎಂದು ರಮೇಶ ಜಾರಕಿಹೊಳಿ ಹೇಳಿದ್ದರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಕೂಡ ಇದು ನಕಲಿ ಸಿಡಿ ಎಂದು ಹೇಳಿದ್ದಲ್ಲದೆ ಪ್ರಕರಣ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿದ್ದರು.

ರಮೇಶ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಸಲೆಂದೇ ನಕಲಿ ಸಿಡಿ ತಯಾರಿಸಲಾಗಿತ್ತು ಎಂದು ಆರೋಪಿಸಿದ್ದರು. ಅಲ್ಲದೆ ರಮೇಶ ಜಾರಕಿಹೊಳಿ ಮನೆಯಿಂದ ಹೊರಗೆಬರಬೇಕೆೆಂದು ಬಾಲಚಂದ್ರ ಜಾರಕಿಹೊಳಿ ಒತ್ತಾಯಿಸಿದ್ದರು. ಇದು ಹನಿಟ್ರ್ಯಾಪ್ ಎಂದೂ ಕೆಲವರು ಪ್ರತಿಕ್ರಿಯಿಸಿದ್ದರು.

ಈ ಪ್ರಕರಣದಲ್ಲಿ 5 ಕೋಟಿ ರೂ. ಕೈ ಬದಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದರು. ಇದರಿಂದ ಮನನೊಂದು ದಿನೇಶ ಕಲ್ಲಳ್ಳಿ ಪ್ರಕರಣ ವಾಪಸ್ ಪಡೆದಿದ್ದರು.

ಇದೀಗ ರಮೇಶ ಜಾರಕಿಹೊಳಿ ಪತ್ರಿಕಾಗೋಷ್ಠಿ ನಡೆಸಲು ನಿರ್ಧರಿಸಿದ್ದಾರೆ. ಮಂಗಳವಾರ ಬೆಳಗ್ಗೆ 9.30ಕ್ಕೆ ಅವರು ಪತ್ರಿಕಾಗೋಷ್ಠಿ ನಡೆಸಲಿದ್ದು, ಕುತೂಹಲ ಮೂಡಿಸಿದೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ