Breaking News
Home / ಜಿಲ್ಲೆ / ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರ ಬಗ್ಗೆ ಜನರೇ ಮಾಹಿತಿ ನೀಡಿ; ಶ್ರೀರಾಮುಲು ಮನವಿ

ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರ ಬಗ್ಗೆ ಜನರೇ ಮಾಹಿತಿ ನೀಡಿ; ಶ್ರೀರಾಮುಲು ಮನವಿ

Spread the love

ಬೆಂಗಳೂರು (ಏಪ್ರಿಲ್ 01); ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸುಮಾರು 2,000 ಜನ ಭಾಗವಹಿಸಿದ್ದಾರೆ. ಈ ಪೈಕಿ ಕರ್ನಾಟಕದಿಂದ 300 ಜನ ಭಾಗವಹಿಸಿದ್ದಾರೆ. ಹೀಗಾಗಿ ಈ ಸಭೆಯಲ್ಲಿ ಭಾಗವಹಿಸಿದವರ ಕುರಿತು ಜನ ಮಾಹಿತಿ ನೀಡಬೇಕಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ.

ಇಂದು ಬಾಗಲಕೋಟೆಯಲ್ಲಿ ಮಾತನಾಡಿರುವ ಅವರು, “ರಾಜ್ಯದಲ್ಲಿ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾದ 40 ಜನ ಪತ್ತೆಯಾಗಿದ್ದಾರೆ. ಇವರ ಮಾದರಿಯನ್ನು ಪರಿಶೀಲನೆಗೆ ಕಳುಹಿಸಲಾಗಿದೆ. ಉಳಿದವರ ಪತ್ತೆ ಕಾರ್ಯವೂ ನಡೆಯುತ್ತಿದೆ. ರಾಜ್ಯ ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ಪ್ರಾರ್ಥನಾ ಸಭೆಯಲ್ಲಿ ಮಲೇಷ್ಯಾ, ಇಂಡೋನೇಷ್ಯಾದ ಜನ ಸಹ ಭಾಗವಹಿಸಿದ್ದರು. ಹೀಗಾಗಿ ಸೋಂಕು ಹೆಚ್ಚು ಹರಡುವ ಸಾಧ್ಯತೆ ಇದ್ದು ಈ ಕುರಿತು ಜನ ಮಾಹಿತಿ ನೀಡಬೇಕು ಎಂದು ಅವರು ಕೇಳಿಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ವೆಂಟಿಲೇಟರ್‌ ಕುರಿತು ಮಾತನಾಡಿರುವ ಅವರು, “ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಹೆಚ್ಚು ವೆಂಟಿಲೇಟರ್‌ ಅಗತ್ಯವಿದೆ. ಮೊದಲು 500 ವೆಂಟಿಲೇಟರ್ ಪ್ರಸ್ತಾಪ ಮಾಡಲಾಗಿತ್ತು. ಆದರೆ, ಇದೀಗ 1000 ವೆಂಟಿಲೇಟರ್‌ ಖರೀದಿಗೆ ಸರ್ಕಾರ ಮುಂದಾಗಿದೆ. ವಿದೇಶದಿಂದ 16550 ತ್ರಿಲೇಯರ್ ಮಾಸ್ಕ್, 2215 ಎನ್ 95 ಮಾಸ್ಕ್ ಹಾಗೂ 2030 ಪ್ರೊಟೆಕ್ಷನ್ ಕಿಟ್ ಲಭ್ಯವಿದೆ ಎಂದು ಶ್ರೀರಾಮುಲು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ