Breaking News

ಜಲಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿ‌ಗೆ ಕೊಡಬೇಕು: ಶ್ರೀಮಂತ ಪಾಟೀಲ

Spread the love

ಬೆಳಗಾವಿ: ಜಲಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿ‌ಗೆ ಕೊಡಬೇಕು. ಈ ಬಗ್ಗೆ ನಾನು ಸಹ ಸಿಎಂಗೆ ಒತ್ತಾಯ ಮಾಡುತ್ತೇನೆ ಎಂದು ಸಚಿವ ಶ್ರೀಮಂತ್ ಪಾಟೀಲ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ರಮೇಶ್ ಜಾರಕಿಹೊಳಿ‌ ಹೇಳಿದಂತೆ ಸಿಡಿ ಪ್ರಕರಣದ ಬಗ್ಗೆ ಆದಷ್ಟು ಬೇಗ ಉನ್ನತ ಮಟ್ಟದ ತನಿಖೆಯಾಗಬೇಕು. ರಮೇಶ್​ ಒಳ್ಳೆಯ ಮನುಷ್ಯ. ನನ್ನ ಅಭಿಪ್ರಾಯದಂತೆ ಅವರಿಗೆ ಕ್ಲೀನ್ ಚಿಟ್​ ಸಿಗಬಹುದು. ಹೀಗಾಗಿ, ಸಮಗ್ರ ತನಿಖೆ ಆಗಬೇಕು. ಪ್ರಕರಣದಲ್ಲಿ ಯಾರಿದ್ದಾರೋ ಅವರಿಗೆ ಶಿಕ್ಷೆಯಾಗಬೇಕು ಎಂಬುದು ಎಲ್ಲರ ಒತ್ತಾಯವಾಗಿದೆ ಎಂದರು.

ಕಳೆದ ಹಲವು ವರ್ಷಗಳಿಂದ ಉತ್ತರ ಭಾಗದ ನೀರಾವರಿ ಯೋಜನೆಗಳು ಸಾಕಷ್ಟು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಹೀಗಾಗಿ, ಜಲಸಂಪನ್ಮೂಲ ಖಾತೆಯನ್ನು ಬಾಲಚಂದ್ರ ಜಾರಕಿಹೊಳಿ‌ಗೆ ಅವರಿಗೆ ಕೊಡಬೇಕು. ಇದರಿಂದ ಈ ಭಾಗದ ಸಾಕಷ್ಟು ಯೋಜನೆಗಳನ್ನು ಪೂರ್ಣಗೊಳಿಸಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ: ಯುವ ಸಮಿತಿ ಮಹಿಳಾ ಘಟಕದಿಂದ ಅದ್ದೂರಿ ‘ಅರಿಶಿನ-ಕುಂಕುಮ’ ಕಾರ್ಯಕ್ರಮ

Spread the loveಮಹಿಳಾ ಸಬಲೀಕರಣ ಮತ್ತು ಸಂಘಟನೆಯ ಉದ್ದೇಶದೊಂದಿಗೆ, ಬೆಳಗಾವಿಯ ಕಾವಳೆ ಸಂಕುಲದಲ್ಲಿ ಮಹಾರಾಷ್ಟ್ರ ಏಕೀಕರಣ ಯುವ ಸಮಿತಿಯಿಂದ ಸಾಧಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ