Breaking News

ಶಿವರಾತ್ರಿಯ ವಿಶೇಷ ಪೂಜೆ ವೇಳೆ ನಾಗರಾಜ ಪ್ರತ್ಯಕ್ಷ; ಭಕ್ತಿ, ಭಾವದಿಂದ ಕೈಮುಗಿದ ಭಕ್ತರು

Spread the love

ಕೊಪ್ಪಳ: ಶಿವರಾತ್ರಿಯ ದಿನವಾದ ಇಂದು ಕೊಪ್ಪಳದ ಹೊರವಲಯದಲ್ಲಿರುವ ಮಳೆ ಮಲ್ಲೇಶ್ವರ ದೇವಾಲಯದಲ್ಲಿ ಅಚ್ಚರಿಯೊಂದು ನಡೆದಿದೆ.

ಶಿವರಾತ್ರಿಯ ಹಿನ್ನೆಲೆಯಲ್ಲಿ ಇಂದು ದೇವಾಲಯಕ್ಕೆ ಸಾಕಷ್ಟು ಭಕ್ತರು ಆಗಮಿಸಿದ್ದರು. ಶಿವನಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದೇವಾಲಯದ ಹೊರಗಿನಿಂದ ಬಂದ ನಾಗರ ಹಾವೊಂದು ಗರ್ಭಗುಡಿಯ ಒಳಗಡೆ ಪ್ರವೇಶಿಸಿದೆ. ಲಿಂಗದ ಕಡೆಗೆ ತೆರಳಿದ ಹಾವು ಅಲ್ಲಿಂದ ಕಾಣೆಯಾಗಿದೆ. ಹಾವನ್ನು ಕಂಡ ಭಕ್ತರು ಧನ್ಯತಾಭಾವದಿಂದ ಕೈಮುಗಿದಿದ್ದಾರೆ.


Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ