Breaking News

ಸಹೋದರನ ಹಾದಿಯನ್ನೇ ಹಿಡಿದ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸಗೆ ಸೇರ್ಪಡೆ…

Spread the love

ನಟ, ರಾಜಕಾರಣಿ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಕೈಹಿಡಿದಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈ ನಡುವೆ ಸಹೋದರನ ಹಾದಿಯನ್ನೇ ಅಕ್ಕ ಗೀತಾ ಶಿವರಾಜ್ ಕುಮಾರ್ ಸಹ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ.

ನಟ ಶಿವರಾಜ್ ಕುಮಾರ್ ಅವರ ಪತ್ನಿ, ಜೆಡಿಎಸ್ ಸದಸ್ಯೆ ಗೀತಾ ಶಿವರಾಜ್‌ ಕುಮಾರ್ ಅವರು ಸಹ ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಬಲವಾಗಿ ಕೇಳಿ ಬರುತ್ತಿದೆ. ಸದಾಶಿವನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಮಧು ಬಂಗಾರಪ್ಪ, ‘ಅಕ್ಕ ಈಗಾಗಲೇ ಕಾಂಗ್ರೆಸ್‌ಗೆ ಬಂದಾಗಿದೆ ಎಂದೇ ತಿಳಿದುಕೊಳ್ಳಿ’ ಎಂದು ಹೇಳಿದರು.

ಪಕ್ಕದಲ್ಲೇ ಇದ್ದ ಡಿ.ಕೆ.ಶಿವಕುಮಾರ್ ಮಾತನಾಡಿ, ‘ನಾವು ಅವರೊಂದಿಗೆ ಅಧಿಕೃತವಾಗಿ ಮಾತನಾಡುತ್ತೇವೆ. ಅವರೊಬ್ಬ ಗೌರವಾನ್ವಿತ ಮಹಿಳೆ. ಪಕ್ಷ ಕಷ್ಟದಲ್ಲಿದ್ದಾಗ ಹೋರಾಟ ಮಾಡಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಅವರ ಕುಟುಂಬಕ್ಕೆ ರಾಷ್ಟ್ರಮಟ್ಟದಲ್ಲಿ ಗೌರವ ಇದೆ. ನಾವು ಅವರನ್ನು ಗೌರವದಿಂದ ಕಾಣಬೇಕಾಗಿದೆ. ನಾವು ಸಹ ಕೆಲವು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ದೆಹಲಿ ಮಟ್ಟದಲ್ಲಿ ಅವರ ಬಗ್ಗೆ ಮಾತನಾಡಬೇಕಿದೆ. ಅವರಿಗೆ ಏನು ಗೌರವವನ್ನು ನಾವು ಕೊಡಬೇಕೋ ಅದನ್ನು ಕೊಡಲೇ ಬೇಕಾಗುತ್ತದೆ’ ಎಂದಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ