Breaking News
Home / ರಾಜ್ಯ / ಕಿತ್ತೂರು ಕರ್ನಾಟಕಕ್ಕೆ 371 ಜೆ ವಿಶೇಷ ಸ್ಥಾನ ನೀಡಿ : ಮಾಜಿ ಶಾಸಕ ಕೋನರೆಡ್ಡಿ ಆಗ್ರಹ

ಕಿತ್ತೂರು ಕರ್ನಾಟಕಕ್ಕೆ 371 ಜೆ ವಿಶೇಷ ಸ್ಥಾನ ನೀಡಿ : ಮಾಜಿ ಶಾಸಕ ಕೋನರೆಡ್ಡಿ ಆಗ್ರಹ

Spread the love

ಬೆಳಗಾವಿ : ಕಲ್ಯಾಣ ಕರ್ನಾಟಕದ ಭಾಗದ ಜಿಲ್ಲೆಗಳಿಗೆ ನೀಡಿರುವ ಸಂವಿಧಾನದ ಪರಿಚ್ಛೇದ 371 ಜೆ ತಿದ್ದುಪಡಿ ಮಾಡಿ ಮುಂಬೈ ಕರ್ನಾಟಕದ ಪ್ರದೇಶದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವಂತೆ ಮಾಜಿ ಶಾಸಕ ಎನ್.ಹೆಚ್. ಕೋನರೆಡ್ಡಿ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ವಿಭಾಗದ ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸಿಕೊಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಡಾ. ನಂಜುಂಡಪ್ಪ ವರದಿ ಜಾರಿಯಾದರೂ ಹೆಚ್ಚು ಅಭಿವೃದ್ಧಿಯಾಗಿಲ್ಲ. ಡಾ. ಪರಮಶಿವಯ್ಯ ವರದಿ ನೀಡಿದರೂ ಅನುದಾನ ಕೊರತೆಯಿಂದ ಅಭಿವೃದ್ಧಿ ಸಾಧ್ಯವಾಗಿಲ್ಲ. ಹೀಗಾಗಿ ಮುಂಬೈ ಕರ್ನಾಟಕಕ್ಕೂ 371 ಜೆ ವಿಶೇಷ ಸ್ಥಾನ ನೀಡುವ ಅವಶ್ಯವಿದೆ ಎಂದು ಕೋನಾರೆಡ್ಡಿ ಹೇಳಿದ್ದಾರೆ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ