Breaking News

ಮೈಸೂರಿನಲ್ಲಿ ನಡೆಯಬೇಕಿದ್ದ ಯುವಸಂಭ್ರಮ ರದ್ದು

Spread the love

ಮೈಸೂರು: ನಗರದಲ್ಲಿ ಇದೇ ಮಾ.20ರಂದು ನಡೆಯಬೇಕಿದ್ದ ಯುವಸಂಭ್ರಮ ರದ್ದಾಗಿದೆ.

ಈ ಕುರಿತು ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿರುವ ನಟ ಪುನೀತ್‌ ರಾಜ್‌ಕುಮಾರ್‌ ಮಾತನಾಡಿ, ಮೈಸೂರಿನಲ್ಲಿ ಯುವಸಂಭ್ರಮ ಕಾರ್ಯಕ್ರಮ ನಡೆಸಲು ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ, ರಾಜ್ಯದ ಅನೇಕ ಕಡೆಗಳಿಂದ ʻನಮ್ಮೂರಿನಲ್ಲಿ ಯಾಕೆ ಕಾರ್ಯಕ್ರಮ ಮಾಡುವುದಿಲ್ಲʼ ಎಂದು ಅಭಿಮಾನಿಗಳಿಂದ ಮೆಸೇಜ್‌ ಬರಲು ಶುರುವಾದರು. ಇದನ್ನು ಗಮನದಲ್ಲಿಟ್ಟುಕೊಂಡು ನಮ್ಮ ತಂಡ ಒಂದು ಪಟ್ಟಿ ರೂಪಿಸುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಮಾ.21ರಿಂದ 23ರವರೆಗೆ ನಿಗದಿತ ಊರುಗಳಿಗೆ ಹೋಗಿ ಕಾರ್ಯಕ್ರಮ ಮಾಡುತ್ತೇವೆ. ಯಾವ ಊರು, ಎಲ್ಲಿ ಎಂಬುದನ್ನು ನಮ್ಮ ತಂಡ ಹೇಳುತ್ತದೆ. ಅಲ್ಲಿಗೆ ನಾವೇ ಬಂದು ನಿಮ್ಮನ್ನು ಭೇಟಿಯಾಗುತ್ತೇವೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ