Breaking News

ಹುಬ್ಬಳ್ಳಿಗೆ ಬರುತ್ತಿದ್ದ ಇಬ್ಬರು ಕ್ರೀಡಾಪಟುಗಳ ದುರ್ಮರಣ: ಮೂವರಿಗೆ ಗಂಭೀರ ಗಾಯ

Spread the love

ವಿಜಯಪುರ: ಲಾರಿ ಹಾಗೂ ಥವೇರಾ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕ್ರೀಡಾಪಟುಗಳು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾರ ಕ್ರಾಸ್ ಬಳಿ ಸಂಭವಿಸಿದೆ.

ಮಹಾರಾಷ್ಟ್ರದ ಸೊಲ್ಲಾಪುರದಿಂದ ಹುಬ್ಬಳ್ಳಿಯ ಕಬ್ಬಡ್ಡಿ ಟೂರ್ನಿಯಲ್ಲಿ ಭಾಗವಹಿಸಲು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಸೋಹೈಲ್ ಮತ್ತು ಮಹಾದೇವ ಎಂಬ 20 ವರ್ಷದ ಕ್ರೀಡಾಪಟುಗಳು ಸಾವಿಗೀಡಾಗಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ.
ಥವೇರಾ ವಾಹನಕ್ಕೆ ಮುಖಾಮುಖಿಯಾಗಿ ಲಾರಿ ಡಿಕ್ಕಿ ಹೊಡೆದ ಪರಿಣಾಮ, ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮುಂದೆ ಕುಳಿತಿದ್ದ ಇಬ್ಬರು ಕ್ರೀಡಾಪಟುಗಳು ಪ್ರಾಣವನ್ನ ಕಳೆದುಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದ ಹಾಗೇ ಪ್ರಕರಣ ದಾಖಲು ಮಾಡಿಕೊಂಡಿರುವ ಕೊಲ್ಹಾರ ಠಾಣೆಯ ಪೊಲೀಸರು ಮುಂದಿನ ಕಾನೂನು ಕ್ರಮವನ್ನ ಜರುಗಿಸಿದ್ದಾರೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ