Breaking News
Home / ಜಿಲ್ಲೆ / ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ, ನೆರವಿಗೆ ಬನ್ನಿ – ವಿಧಾನಸಭೆಯಲ್ಲಿ ಅಭಯ ಪಾಟೀಲ

ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ, ನೆರವಿಗೆ ಬನ್ನಿ – ವಿಧಾನಸಭೆಯಲ್ಲಿ ಅಭಯ ಪಾಟೀಲ

Spread the love

ಬೆಂಗಳೂರು – ರಾಜ್ಯದಲ್ಲಿ ಕೊರೋನಾದಿಂದ ತತ್ತರಿಸಿರುವ ನೇಕಾರರು ಕಾಯಿಪಲ್ಲೆ ಮಾರುತ್ತಿದ್ದಾರೆ. ಕೆಲವರು ಗುಳೆ ಹೋಗಿದ್ದರೆ ಇನ್ನು ಕೆಲವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರಕಾರ ತಕ್ಷಣ ಅವರ ನೆರವಿಗೆ ಬರಬೇಕು ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಆಗ್ರಹಿಸಿದ್ದಾರೆ.

ವಿಧಾನಸಭೆಯಲ್ಲಿ ಬುಧವಾರ ಮಾತನಾಡಿದ ಅವರು ನೇಕಾರ ಸಮ್ಮಾನ್ ನಿಧಿಯನ್ನು 2 ಸಾವಿರ ರೂ.ಗಳಿಂದ 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು. ವಿದ್ಯುತ್ ಮಗ್ಗ ನೆಕಾರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ಜವಳಿ ಸಚಿವರು ನಮ್ಮ ಜಿಲ್ಲೆಯವರೇ ಇದ್ದಾರೆ. ಅವರಿಗೆ ಪರಿಸ್ಥಿತಿಯ ಅರಿವಿದೆ. ಕೊರೋನಾ ವಾರಿಯರ್ಸ್ ಸನ್ಮಾನಕ್ಕೆ ಸರಕಾರ ನೇಕಾರರಿಂದ ಸೀರಿ ಖರೀದಿಸಲಿದೆ ಎಂದು ಹೇಳಲಾಗಿತ್ತು. ಆದರೆ ಅದು ಆಗಿಲ್ಲ. ಎಲ್ಲ ಶಾಸಕರಿಗೂ ನಾನು ಪತ್ರ ಬರೆದಿದ್ದೆ. ಆದರೆ ಸಚಿವ ಶಿವರಾಮ ಹೆಬ್ಬಾರ ಮಾತ್ರ 7 ಲಕ್ಷ ರೂ. ಸೀರೆ ಖರೀದಿಸಿದ್ದಾರೆ. ಹಾಗಾಗಿ ತಕ್ಷಣ ಸಂಕಷ್ಟದಲ್ಲಿರುವ ನೇಕಾರರ ನೆರವಿಗೆ ಸರಕಾರ ಬರಬೇಕು ಎಂದು ಅವರು ಒತ್ತಾಯಿಸಿದರು..


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ