Breaking News

ಮುಂಬೈ ಕೇಂದ್ರಾಡಳಿತ ಪ್ರದೇಶ ಮಾಡಬೇಕು: ಕರವೆ ಪ್ರವೀಣ ಶೆಟ್ಟಿ.

Spread the love

ಕನ್ನಡಿಗರಿಗೆ ಎಂ.ಇ.ಎಸ್ ಮುಖಂಡ ಶುಭಂ ಸಾಳುಂಕೆ ದಮ್ಕಿ ಹಾಕಿರುವ ಹಿನ್ನೆಲೆಯಲ್ಲಿ ಗುರುವಾರ ಬೆಳಗಾವಿಯ ಚನಮ್ಮ ವೃತ್ತದಲ್ಲಿ ಕರವೆ ಪ್ರವಿಣ ಶೆಟ್ಟಿ ಬಣದಿಂದ ಪ್ರತಿಭಟನೆ ಮಾಡಲಾಯಿತು.

ಕೆಲ ದಿನಗಳಹಿಂದ ಎಂ.ಇ.ಎಸ್ ಮುಖಂಡ ಶುಭಂ ಸಾಳುಂಕೆ ಕೆಂಪು,ಹಳದಿ ಬಣ್ಣದ ಶಾಲು ಧ್ವಜ ನಮ್ಮ ಮುಂದೆ ಬಂದರೆ ಅಟ್ಟಾಡಿಸಿ ಹೊಡೆಯುದಾಗಿ ಹೇಳಿಕೆ ನೀಡುವ ಮೂಲಕ ಕನ್ನಡಿಗರನ್ನು ಕೆರಳಿಸಿದರು.

ಈ ಕುರಿತು ಮಾತನಾಡಿರುವ ಪ್ರವೀಣ ಕುಮಾರ ಶೆಟ್ಟಿ ಎಂ.ಇ ಎಸ್, ಶಿವಸೇನೆ ಕನ್ನಡಿಗರನ್ನು ಕೆರಳಿಸಿದೆ. ನಮ್ಮ ಬಾವುಟ ಮತ್ತು ಶಾಲು ಹಾಕಿರುವನ್ನು ಹೊಡೆಯುದ್ದಾಗಿ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಭಾವನೆಯನ್ನು ಕೆರಳಿಸಿದೆ. ಈ ಕೂಡಲೆ ಬಾಂಬೆಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು.‌ ಇಂದು ನಾವು ಮಹಾರಾಷ್ಟ್ರದ ಶಿನ್ನೋಳ್ಳಿಗೆ ಹೋಗಿ ಕನ್ನಡ ಬಾವುಟ ನೆಡುತ್ತೇವೆ. ಕನ್ನಡ ವಿರೋಧಿ ಚಟುವಟಿಕೆಗಳನ್ನು ಮಾಡುವರ ವಿರುದ್ದ ನಮ್ಮ ಸರ್ಕಾರ ಯಾವುದೇ ಕ್ರಮ ಕೈ ಗೊಳ್ಳುತ್ತಿಲ್ಲ. ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ತೊಂದರೆ ಆಗಬಾರದು ಅವರಿಗೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.‌
ಬೆಳಗಾವಿ ವರದಿ ಕುತುಬುದ್ದಿನ್.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ