Breaking News

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ರೆ, ಮುಲಾಜಿಲ್ಲದೇ ಕ್ರಮ ಕೈಗೊಳ್ತೇವೆ: ಜಗದೀಶ್ ಶೆಟ್ಟರ್‌ ಎಚ್ಚರಿಕೆ

Spread the love

ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆ ಮಾಡುವ ವೇಳೆ ಸ್ಥಳೀಯರಿಗೆ ಉದ್ಯೋಗ ನೀಡದೆ ನಿಯಮ ಉಲ್ಲಂಘಿಸಿದ್ರೆ, ಅಂತಹ ಉದ್ಯಮಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕೈಗಾರಿಕೆಗಳಿಗೆ ಜಮೀನು ನೀಡುವ ವೇಳೆಯೇ ಒಪ್ಪಂದ ಮಾಡಿಕೊಳ್ಳಲಾಗುತ್ತೆ. ಜಮೀನು ನೀಡಿದ ಕುಟುಂಬಸ್ಥರಿಗೆ ಉದ್ಯೋಗ ನೀಡಬೇಕು. ಕಾರಣವೊಡ್ಡಿ ಉದ್ಯೋಗ ನೀಡದಿದ್ರೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. ರಸ್ತೆಗಾಗಿ ಜಮೀನು ಹೋಗಿದ್ದು, ನಮಗೆ ಸಂಬಂಧ ಇಲ್ಲ ಎಂದು ಉದ್ಯಮಿಗಳು ಹೇಳುವಂತಿಲ್ಲ. ಅವರಿಗೂ ಉದ್ಯೋಗ ನೀಡಬೇಕಾಗುತ್ತದೆ’ ಎಂದು ಹೇಳಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ