Breaking News

ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಫಿಕ್ಸ್..? ಸುಳಿವು ಕೊಟ್ಟ ಸಿಎಂ..!

Spread the love

ತುಮಕೂರು, ಮಾ.20- ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ನಿಯಂತ್ರಣಕ್ಕೆ ಬಾರದಿದ್ದರೆ ಲಾಕ್‍ಡೌನ್ ಹಾಗೂ ರಾತ್ರಿ ಕಫ್ರ್ಯೂ ವಿಧಿಸುವುದು ಸೇರಿದಂತೆ ಒಂದು ವಾರದೊಳಗೆ ನಿರ್ಧಾರ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಈ ಮೂಲಕ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಜಾರಿಮಾಡುವ ಸುಳಿವನ್ನು ಸಿಎಂ ನೀಡಿದ್ದಾರೆ.

ತಿಪಟೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಲಾಕ್‍ಡೌನ್ ಜಾರಿ ಇಲ್ಲವೆ ರಾತ್ರಿ ಕಫ್ರ್ಯೂ ವಿಸುವ ಕುರಿತಾಗಿ ತಜ್ಞರ ಅಭಿಪ್ರಾಯ ಪಡೆದು ತೀರ್ಮಾನಿಸುವುದಾಗಿ ತಿಳಿಸಿದರು.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ