Breaking News

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಪಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ: B.S.Y.

Spread the love

ರಾಯಚೂರು: ಉಪಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಶಗಳು ಬಿರುಸಿನ ಪ್ರಚಾರ ಆರಂಭಿಸಿವೆ. ಈ ನಡುವೆ ರಮೇಶ್ ಜಾರಕಿಹೊಳಿ ಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಶೀಘ್ರದಲ್ಲಿ ಅಭ್ಯರ್ಥಿ ಘೋಷಿಸಲಾಗುತ್ತದೆ. ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಖಚಿತ ಎಂದರು.

ಸರ್ಕಾರದ ಯೋಜನೆಗಳೇ ಬಿಜೆಪಿ ಗೆಲುವಿನ ಅಸ್ತ್ರವಾಗಲಿದೆ. ಅಭಿವೃದ್ಧಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿ ಮತ ಕೇಳಲಾಗುವುದು ಎಂದು ಹೇಳಿದರು. ಇದೇ ವೇಳೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಪಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ