Breaking News

ಕಪಿಲೇಶ್ವರ ಮಂದಿರದ ಬಳಿ ಆಟವಾಡಲೆಂದು ಹೋದ ಬಾಲಕ; ಕಲ್ಯಾಣಿಯಲ್ಲಿ ಮುಳುಗಿ ಸಾವು

Spread the love

ಬೆಳಗಾವಿ: ಆಟವಾಡುತ್ತಿದ್ದ ಬಾಲಕ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಕಪಿಲೇಶ್ವರ ಮಂದಿರದ ಬಳಿ ನಡೆದಿದೆ.

ಮೃತ ಬಾಲಕನನ್ನು 7 ವರ್ಷದ ಸ್ವರಾಜ್ ಎಂದು ಗುರುತಿಸಲಾಗಿದೆ. ಶನಿವಾರ ಸ್ನೇಹಿತರ ಜೊತೆ ಕಪಿಲೇಶ್ವರ ಮಂದಿರಕ್ಕೆ ತೆರಳಿದ್ದ ಬಾಲಕ ಮರಳಿ ಮನೆಗೆ ವಾಪಸ್ ಆಗಿಲ್ಲ. ಇದರಿಂದ ಗಾಬರಿಯಾದ ಪೋಷಕರು ಖಡೇಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಪಿಲೇಶ್ವರ ಮಂದಿರದ ಬಳಿ ಬಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಆದರೂ ಬಾಲಕನ ಸುಳಿವಿಲ್ಲ. ಆದರೆ ಇಂದು ಬೆಳಿಗ್ಗೆ ಬಾಲಕನ ಮೃತದೇಹ ಮಂದಿರದ ಕಲ್ಯಾಣಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ