Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ನರೇಂದ್ರ ಮೋದಿಗೆ ಸಂದೇಶ ನೀಡಿದಂತೆ ದೀಪ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡೋಣ: ಚಿವ ರಮೇಶ ಜಾರಕಿಹೊಳಿ

ನರೇಂದ್ರ ಮೋದಿಗೆ ಸಂದೇಶ ನೀಡಿದಂತೆ ದೀಪ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡೋಣ: ಚಿವ ರಮೇಶ ಜಾರಕಿಹೊಳಿ

Spread the love

ಬೆಳಗಾವಿ: ಕೊರೊನಾ ಸೋಂಕು ನಿರ್ಮೂಲನೆಗೆ ಹೆಜ್ಜೆ ಹಾಕುತ್ತಿರುವ ನಾವು ಏ.5ರಂದು ಪ್ರಧಾನಿ ನರೇಂದ್ರ ಮೋದಿಗೆ ಸಂದೇಶ ನೀಡಿದಂತೆ ದೀಪ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡೋಣವೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು,ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಂಡಿವೆ. ಈ ನಿಟ್ಟಿನಲ್ಲಿ ಜನರು ನಿಯಮಗಳನ್ನು ಪಾಲಿಸಬೇಕು ಎಂದರು.

ಭಾರತವನ್ನು ಕೊರೊನಾ ಸೋಂಕು ಮುಕ್ತ ಮಾಡುವ ನಮ್ಮ ಸಂಕಲ್ಪ ಶಕ್ತಿಯ ಬೆಳಕನ್ನು ವಿಶ್ವಕ್ಕೆ ತೋರಿಸಬೇಕಾಗಿದೆ. ಸ್ವಾಸ್ಥ್ಯ ಸಮಾಜ ನಿರ್ಮಿಸಬೇಕಾಗಿದೆ. ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ ಭಾನುವಾರ ಏ. 5 ರ ರಾತ್ರಿ 9 ಗಂಟೆಗೆ ಕನಿಷ್ಠ 9 ನಿಮಿಷ ಗಳ ಕಾಲ ನಮ್ಮ ಮನೆಗಳ ವಿದ್ಯುತ್ ದೀಪಗಳನ್ನು ಆರಿಸಿ, ಮೇಣದ ಬತ್ತಿಗಳ ದೀಪಗಳನ್ನು ಪ್ರಜ್ವಲಿಸೋಣ ಎಂದು ತಿಳಿಸಿದ್ದಾರೆ.

 

ಕೊರೊನಾ ಸೋಂಕು ಹೊಡೆದೊಡಿಸಲು ಸಾಮಾಜಿಕ ಅಂತರವೇ ರಾಮಬಾಣವಾಗಿದೆ. ಇದರಿಂದ ದೀಪ ಹಚ್ಚುವ ನೆಪದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮರೆಯಬೇಡಿ ಎಂದಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ