Breaking News

ತಾನೂ ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿ: ಪ್ರಮೋದ್ ಮುತಾಲಿಕ್

Spread the love

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಿಂದ ತಾವು ಟಿಕೆಟ್ ಆಕಾಂಕ್ಷಿ ಆಗಿದ್ದು, ತಮಗೆ ಟಿಕೆಟ್ ದೊರೆಯುವ ವಿಶ್ವಾಸವಿದೆ ಎಂದು ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಷಯವಾಗಿ ಹಲವು ನಾಯಕರೊಂದಿಗೆ ಚರ್ಚಿಸಿದ್ದೇನೆ. ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. ನನಗೀಗ 66 ವರ್ಷ, ಇದು ಕೊನೆಯ ಯತ್ನ. ದೊರೆತರೆ ಸರಿ ಇಲ್ಲವಾದರೆ ಇಲ್ಲ. ಪಕ್ಷೇತರನಾಗಿ ಸ್ಪರ್ಧಿಸುವುದಿಲ್ಲ ಎಂದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಅವಧಿ ಎರಡೂವರೆ ವರ್ಷ ಇದೆ. ನನಗೆ ಟಿಕೆಟ್ ದೊರೆತು ಗೆದ್ದರೆ ಆದರ್ಶ ಕ್ಷೇತ್ರವಾಗಿಸುವೆ. ಅವಧಿ ಮುಗಿದ ನಂತರ ರಾಜಕೀಯವಾಗಿ ನಿವೃತ್ತಿ ಹೊಂದುವುದಾಗಿ ತಿಳಿಸಿದರು.


Spread the love

About Laxminews 24x7

Check Also

ಶಾಂತೈ ವೃದ್ಧಾಶ್ರಮದ ಸಹಯೋಗದೊಂದಿಗೆ ಕಪ್ಲೇಶ್ವರ ಚೌಕ್ ಗಣೇಶೋತ್ಸವದಲ್ಲಿ ಹಿರಿಯರನ್ನು ಸನ್ಮಾನಿಸಲಾಯಿತು

Spread the love ಶಾಂತೈ ವೃದ್ಧಾಶ್ರಮದ ಸಹಯೋಗದೊಂದಿಗೆ ಕಪ್ಲೇಶ್ವರ ಚೌಕ್ ಗಣೇಶೋತ್ಸವದಲ್ಲಿ ಹಿರಿಯರನ್ನು ಸನ್ಮಾನಿಸಲಾಯಿತು ಹೃದಯಸ್ಪರ್ಶಿ ಸತ್ಕಾರದಲ್ಲಿ, ಕಪ್ಲೇಶ್ವರ ಚೌಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ