Breaking News

ವೈರಲ್ ಆಡಿಯೋ, ಎಫ್‌ಐಆರ್‌ಗೆ ಹೆದರಲ್ಲ ಎಂದ ರಮೇಶ್ ಜಾರಕಿಹೊಳಿ

Spread the love

ಬೆಂಗಳೂರು, ಮಾರ್ಚ್ 26: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಪೂರಕವಾಗಿ ಇಂದು ಆಡಿಯೋ ಸಂಭಾಷಣೆಯೊಂದು ಹೊರ ಬಂದಿದೆ. ಸಿಡಿಯಲ್ಲಿರುವ ಯುವತಿ ತಮ್ಮ ವಕೀಲ ಜಗದೀಶ್ ಕುಮಾರ್ ಮೂಲಕ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ಹಾಕಿದ್ದಾರೆ.

ಈ ಪ್ರಕರಣದ ಎಲ್ಲಾ ಬೆಳವಣಿಗೆ ಬಗ್ಗೆ ಮೂರು ಬಾರಿ ಮಾಧ್ಯಮಗಳ ಮುಂದೆ ಬಂದ ರಮೇಶ್ ಅವರು ಸಂಜೆ ವೇಳೆಗೆ ಆಡಿಯೋ ಹಾಗೂ ಎಫ್‌ಐಆರ್ ಬಗ್ಗೆ ಹುಬ್ಬೇರಿಸುವಂಥ ಹೇಳಿಕೆಗಳನ್ನು ನೀಡಿದ್ದಾರೆ. ಜೊತೆಗೆ ನಾಳೆ ಎಲ್ಲಕ್ಕಿಂತ ಅತಿದೊಡ್ದ ಬಾಂಬ್ ಸಿಡಿಸುತ್ತೇನೆ, ಸ್ವಲ್ಪ ಕಾಯಿರಿ ಎಂದು ಕುತೂಹಲ ಮೂಡಿಸಿದ್ದಾರೆ.

 

ಎಫ್‌ಐಆರ್ ಹಾಕಿದ ತಕ್ಷಣ ಅಪರಾಧಿಯಲ್ಲ, ಬೇಕಾದರೆ 302(ಕೊಲೆ ಆರೋಪ) ಹಾಕಲಿ, ನಾನು ತಪ್ಪು ಮಾಡಿಲ್ಲ, ನಾನು ಜಾಮೀನು ಪಡೆಯಲ್ಲ,

ಡಿ.ಕೆ ಶಿವಕುಮಾರ್ ನನ್ನ ಹಳೆಯ ಗೆಳೆಯ ಅವರಿಗೆ ಒಳ್ಳೆಯದಾಗಲಿ, ಆಡಿಯೋದಲ್ಲಿ ಅವರ ಹೆಸರಿದ್ದ ಮಾತ್ರಕ್ಕೆ ಅವರು ಆರೋಪಿಯಲ್ಲ, ಅವರು ನನ್ನಂತೆ ರಾಜೀನಾಮೆ ನೀಡಬಾರದು ಎಂದು ರಮೇಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ನಾನು ಹೆದರುವುದಿಲ್ಲ, ನಾನು ವಕೀಲರು ಹೇಳಿದಂತೆ ನಡೆದುಕೊಳ್ಳುತ್ತಿದ್ದೇನೆ, ನಾಳೆ 4 ರಿಂದ 6 ಗಂಟೆ ವೇಳೆಯಲ್ಲಿ ದೊಡ್ಡ ಬಾಂಬ್ ಹೇಳುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ