Breaking News
Home / ರಾಜ್ಯ / ಪುದುಚೇರಿಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಏನೇನು ಭರವಸೆ?

ಪುದುಚೇರಿಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಏನೇನು ಭರವಸೆ?

Spread the love

ಪುದುಚೇರಿ: ಪುದುಚೇರಿ ವಿಧಾನಸಭೆಗೆ ಬಿಜೆಪಿಯ ಪ್ರಣಾಳಿಕೆ, ‘ಬೆಸ್ಟ್‌ (BEST) ಪುದುಚೇರಿ’ ಅನ್ನು ಶುಕ್ರವಾರ ಇಲ್ಲಿ ಬಿಡುಗಡೆ ಮಾಡಲಾಯಿತು.

ಕೆ.ಜಿ. ತರಗತಿಯಿಂದ ಉನ್ನತ ಶಿಕ್ಷಣದವರೆಗೆ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ, ಜವಳಿ ಉದ್ದಿಮೆಗಳನ್ನು ಪುನರಾರಂಭಿಸುವುದು, ಜವಳಿ ಪಾರ್ಕ್‌ ಆರಂಭ ಸೇರಿದಂತೆ ಅನೇಕ ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.

ಪುದುಚೇರಿಯನ್ನು ವ್ಯಾಪಾರ (B), ಶಿಕ್ಷಣ (E), ಅಧ್ಯಾತ್ಮ (S) ಹಾಗೂ ಪ್ರವಾಸೋದ್ಯಮ (T) ಕೇಂದ್ರವಾಗಿಸುವ ಭರವಸೆಯನ್ನು ನೀಡಲಾಗಿದೆ. ತಮಿಳು ಕವಿ ಸುಬ್ರಹ್ಮಣ್ಯಭಾರತಿ ಅವರ ಪ್ರತಿಮೆ ಸ್ಥಾಪನೆ, ಹೂಡಿಕೆದಾರರನ್ನು ಆಕರ್ಷಿಸಲು ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜನೆ, ಬಂದರು ಹಾಗೂ ಮೂಲಸೌಲಭ್ಯಗಳನ್ನು ಉತ್ತಮಪಡಿಸುವ ಮೂಲಕ ಮೀನುಗಾರರ ಅಭಿವೃದ್ಧಿಗೆ ಕ್ರಮ ಮುಂತಾದವುಗಳ ಉಲ್ಲೇಖವೂ ಪ್ರಣಾಳಿಕೆಯಲ್ಲಿದೆ.

ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ‘ಬಿಜೆಪಿ ಅಧಿಕಾರಕ್ಕೆ ಬಂದರೆ, ಈವರೆಗೆ ಬೆಳಕು ಕಾಣದಿರುವ ಎಲ್ಲಾ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಲಾಗುವುದು. ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ನಿರೀಕ್ಷೆಯಾಗಿದೆ’ ಎಂದರು.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ