Breaking News

ಹರುಕು ಬಾಯಿಯಿಂದ ಹಗುರುವಾಗಿ ಮಾತಾಡಬೇಡಿ: ಯತ್ನಾಳ್‍ಗೆ ರೇಣುಕಾಚಾರ್ಯ ಎಚ್ಚರಿಕೆ

Spread the love

ಶಿವಮೊಗ್ಗ: ನಿಮ್ಮ ಹರುಕು ಬಾಯಿಯಿಂದ ಮುಖ್ಯಮಂತ್ರಿಗಳ ಬಗ್ಗೆ ಹಗುರುವಾಗಿ ಮಾತಾಡಬೇಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.

ಹರುಕು ಬಾಯಿಯಿಂದ ಹಗುರುವಾಗಿ ಮಾತಾಡಬೇಡಿ: ಯತ್ನಾಳ್‍ಗೆ ರೇಣುಕಾಚಾರ್ಯ ಎಚ್ಚರಿಕೆ

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯತ್ನಾಳ್ ಪದೇ ಪದೇ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಈ ರೀತಿ ಉದ್ಧಟತನದಿಂದ ವರ್ತಿಸಿದ್ದರಿಂದಲೇ ಈ ಹಿಂದೆ ನಿಮ್ಮನ್ನು ಪಕ್ಷದಿಂದ ಉಚ್ಛಾಟಿಸಿದ್ದು, ಆಗ ಜೆಡಿಎಸ್ ಸೇರಿಕೊಂಡು ದೇವೇಗೌಡ ಅವರನ್ನು ಹಾಡಿ ಹೊಗಳಿದ್ರಿ. ಹಿಂದುತ್ವ ಎಲ್ಲಿದೆ ನಿಮಗೆ? ನಿಮ್ಮ ಹರುಕು ಬಾಯಿ, ಎಲುಬಿಲ್ಲದ ನಾಲಗೆಯಿಂದ ಹಗುರವಾಗಿ ಮಾತನಾಡ್ತೀರಾ. ಯಡಿಯೂರಪ್ಪ ಅವರ ಕುಟುಂಬ ಮಾತ್ರ ರಾಜಕಾರಣ ಮಾಡುತ್ತಿದೆಯಾ? ಬೇರೆ ಯಾರು ಕುಟುಂಬ ರಾಜಕಾರಣ ಮಾಡುತ್ತಿಲ್ಲವಾ? ಯಡಿಯೂರಪ್ಪ ಮಾತ್ರ ನಿಮ್ಮ ಕಣ್ಣಿಗೆ ಕಾಣುತ್ತಿದೆಯಾ. ನೀವು ನಿಜವಾಗಿಯೂ ಬಿಜೆಪಿ ತತ್ವ ಸಿದ್ಧಾಂತ ಒಪ್ಪಿಕೊಂಡಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ಏಕ ವಚನದಲ್ಲೇ ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ನಾಲ್ಕು ತಿಂಗಳಿನಿಂದ ಬಾಕಿ ಉಳಿದಿದ್ದ ನರೇಗಾ ಬಾಕಿ ಕೂಲಿ ಬಿಡುಗಡೆ

Spread the loveಬೆಳಗಾವಿ :ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಆಡಳಿತಾತ್ಮಕ ಹಾಗೂ ಆರ್ಥಿಕ ಸಂಘರ್ಷ, ವಿಬಿಜಿ ರಾಮ್‌ಜಿ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ