Breaking News

ಡಿಕೆಶಿ ವಿರುದ್ಧ ಪ್ರತಿಭಟನೆ; ಬೆಳಗಾವಿಗೆ ಹೊರಟು ನಿಂತ ಕೆಪಿಸಿಸಿ ಅಧ್ಯಕ್ಷ

Spread the love

ಬೆಳಗಾವಿ, ಮಾರ್ಚ್ 28; ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ವಿರುದ್ಧ ಪ್ರತಿಭಟನೆ ನಡೆಯುವಾಗಲೇ ಡಿ. ಕೆ. ಶಿವಕುಮಾರ್ ಬೆಳಗಾವಿಗೆ ಹೊರಟು ನಿಂತಿದ್ದಾರೆ.

ಭಾನುವಾರ ಡಿ. ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಾಗುತ್ತಿರುವ ಮೆರವಣಿಗೆ ಸಾಗುತ್ತಿದ್ದು, ಡಿಕೆಶಿ ಅಣಕು ಶವದ ಮೆರವಣಿಗೆ ಮಾಡಿ ಆಕ್ರೋಶ ಹೊರಹಾಕುತ್ತಿದ್ದಾರೆ.

ಡಿ. ಕೆ. ಶಿವಕುಮಾರ್ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆಯುತ್ತಿದ್ದಾರೆ. ರಮೇಶ್ ಜಾರಕಿಹೊಳಿ‌ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುತ್ತಿರುವ ಡಿ. ಕೆ. ಶಿವಕುಮಾರ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.

‘ಡಿಕೆಶಿ ನಾಯಕನಲ್ಲ, ಕಳ್ಳನಾಯಕ’ ಎಂಬ ಬ್ಯಾನರ್ ಪ್ರದರ್ಶನ ಮಾಡುತ್ತಿದ್ದಾರೆ. ಡಿಕೆಶಿ ರಾಜಕೀಯದಲ್ಲಿರಲು ಅನರ್ಹ, ಹುಡುಗಿಯನ್ನು ಇಟ್ಟುಕೊಂಡು ಡಿಕೆಶಿ ರಾಜಕೀಯ ಮಾಡುತ್ತಿದ್ದಾರೆ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.

 

ಬೆಳಗಾವಿಗೆ ಡಿಕೆಶಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬೆಂಗಳೂರು ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಹೊರಟಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅವರಿಗೆ ಮುತ್ತಿಗೆ ಹಾಕಲು ರಮೇಶ್ ಜಾರಕಿಹೊಳಿ ಬೆಂಬಲಿಗರು ತಯಾರಿ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ