Breaking News

‘1 ರಿಂದ9 ತರಗತಿ ಪರೀಕ್ಷೆ ರದ್ದು ಮಾಡುವ ಕುರಿತು ಸಿಎಂ ಜತೆ ಚರ್ಚೆ

Spread the love

ಬೆಂಗಳೂರು,ಮಾ.28- ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗೆ ಕಳೆದ ಬಾರಿಯಂತೆ ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ನಾಳೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಮೂಲಕ ಕಳೆದ ಬಾರಿಯಂತೆ ಈ ಬಾರಿಯೂ 1ರಿಂದ 9ನೇ ತರಗತಿವರೆಗೆ ಪರೀಕ್ಷೆಗಳು ರದ್ದಾಗುವ ಸಾಧ್ಯತೆಯಿದೆ ಎಂಬ ಸುಳಿವನ್ನು ಅವರು ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ಕಳೆದ ಎರಡು ವಾರದಿಂದ ರಾಜ್ಯದಲ್ಲಿ ಮತ್ತೆ ನಿಧಾನವಾಗಿ ಏರುಗತಿಯತ್ತ ಸಾಗಿದೆ. ಇನ್ನು ಎರಡು ತಿಂಗಳ ಕಾಲ ಸೋಂಕಿನ ಪ್ರಮಾಣ ಹೆಚ್ಚಾಗುವ ಸಂಭವವಿದೆ ಎಂದು ತಜ್ಞರು ಸಲಹೆ ನೀಡಿರುವುದಾಗಿ ಹೇಳಿದರು


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ