Breaking News

ಮಹಾನಾಯಕ ಆಗಲು ಹೊರಟವರು ಖಳನಾಯಕನಾಗಿದ್ದು ಕಾಂಗ್ರೆಸ್ ನ ನೈತಿಕ ದಿವಾಳಿತನ: ಬಿಜೆಪಿ

Spread the love

ಬೆಂಗಳೂರು: ಒಬ್ಬ ಅಮಾಯಕ ಹೆಣ್ಣು ಮಗಳನ್ನು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಬಳಸಿಕೊಂಡು ರಾಜ್ಯದ “ಮಹಾ ನಾಯಕ” ಆಗಲು ಹೊರಟ “ಜೈಲು ಹಕ್ಕಿ” ಇಂದು “ಖಳನಾಯಕ” ಆಗಿರುವುದು ಕಾಂಗ್ರೆಸ್ ಪಕ್ಷದ ನೈತಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಬಿಜೆಪಿ ಟೀಕೆ ಮಾಡಿದೆ.

ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿಯು ಟ್ವೀಟ್ ವಾರ್ ಮುಂದುವರಿಸಿದೆ.

ಸೆಕ್ಷನ್ ಸಿದ್ದರಾಮಯ್ಯನವರೇ ನಿಮ್ಮ ನೇತೃತ್ವದಲ್ಲಿ ಸತ್ಯ ಶೋಧನಾ ಸಮಿತಿ ರಚನೆಯಾದರೆ ಒಂದೇ ಕಲ್ಲಿನಲ್ಲಿ ಎರಡು ಹಣ್ಣು ಕೆಡವಲು ಸಾಧ್ಯವಿದೆ. ಒಂದು, ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುತ್ತದೆ. ಇನ್ನೊಂದು, ಡಿಕೆ ಶಿವಕಮಾರ್ ನಡೆಸಿದ ಷಡ್ಯಂತ್ರವನ್ನು ಸಾಬೀತುಪಡಿಸಬಹುದು. ಒಬ್ಬ ಪ್ರತಿಸ್ಪರ್ಧಿಯನ್ನು ಕೆಡವಿದ ಸಾಧನೆ ನಿಮ್ಮದಾಗಲಿದೆ. ಏನಂತೀರಿ ಎಂದು ಟೀಕಿಸಿದೆ.

ಸೆಕ್ಷನ್‌ ಸ್ಪೆಷಲಿಸ್ಟ್‌ ಸಿದ್ದರಾಮಯ್ಯನವರೇ ಸಂತ್ರಸ್ಥ ಯುವತಿಯ ಪೋಷಕರು ನೇರವಾಗಿ ನಿಮ್ಮ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮೇಲೆ ಬೊಟ್ಟು ಮಾಡಿ, ಸಂತ್ರಸ್ಥೆಯನ್ನು ಒತ್ತೆಯಾಗಿರಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಿರುವಾಗ ಯುವತಿಗೆ ಅಪಾಯ ಎದುರಾದರೆ ಕಾನೂನಿನ ಪ್ರಕಾರ ಡಿಕೆಶಿ ಅವರು ಹೊಣೆ ಅಲ್ಲವೇ? ಎಂದು ಬಿಜೆಪಿ ಟ್ವೀಟ್ ಮಾಡಿದೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ