Breaking News

ಅತ್ಯಾಚಾರ ಎಂದಾದರೆ ‘VIDEO’ ಚಿತ್ರೀಕರಿಸಿದ್ದು ಯಾಕೆ ? : ‘CD’ ಲೇಡಿಗೆ ‘SIT’ ಅಧಿಕಾರಿಗಳ ಪ್ರಶ್ನೆ

Spread the love

ಬೆಂಗಳೂರು : ಸಿಡಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 2 ಗಂಟೆಯವರೆಗೆ ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆಯನ್ನು ನೀಡಿದಂತ ಸಿಡಿ ಲೇಡಿಯನ್ನು, ಮುಂದಿನ ವಿಚಾರಣೆಗಾಗಿ ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಎಸ್ ಐಟಿ ಅಧಿಕಾರಿಗಳು ಕರೆದೊಯ್ದಿದ್ದು, . ಅಧಿಕಾರಿಗಳು ಸಿಡಿ ಲೇಡಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಕರೆದೊಯ್ಯುದಂತಹ ಎಸ್ ಐಟಿ ತಂಡದ ಅಧಿಕಾರಿಗಳು, ಯುವತಿಯಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಅಧಿಕಾರಿಗಳು ಸಿಡಿ ಲೇಡಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಸಿಡಿ ಲೇಡಿಗೆ ಎಸ್ ಐ ಟಿ ಅಧಿಕಾರಿಗಳ ಪ್ರಶ್ನೆ..?

ಪ್ರಶ್ನೆ ನಂಬರ್ 1 ) ಯಾವ ವಿಚಾರವಾಗಿ ರಮೇಶ್ ಜಾರಕಿಹೊಳಿಯನ್ನು ಸಂಪರ್ಕಿಸಿದ್ರಿ..?

2) ಅತ್ಯಾಚಾರ ಎನ್ನುವುದಾದರೆ ವಿಡಿಯೋ ಚಿತ್ರೀಕರಿಸಿದ್ದು ಯಾಕೆ..?

3) ವಿಡಿಯೋದಲ್ಲಿದ್ದ ಯುವತಿ ನಾನಲ್ಲ ಎನ್ನಲು ಕಾರಣವೇನು

4) ಗೊಂದಲ ಮೂಡಿಸುವ ಹೇಳಿಕೆಗಳನ್ನು ನೀಡಲು ಕಾರಣವೇನು..? ಯಾವುದಾದರೂ ಒತ್ತಡಗಳಿದ್ವಾ..?

5) ಬೆದರಿಕೆ ಇದೆ ಎಂದು ಹೇಳಿದ್ದೀರಿ..? ಯಾರಿಂದ ನಿಮಗೆ ಬೆದರಿಕೆಯಿದೆ..?

ಹೀಗೆ ಎಸ್ ಐ ಟಿ ಅಧಿಕಾರಿಗಳು ಸಿಡಿ ಲೇಡಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಿದ್ದಾರೆ. ಇನ್ನೂ, ಎಸ್ ಐ ಟಿ ಅಧಿಕಾರಿಗಳ ಪ್ರಶ್ನೆಗೆ ಸಿಡಿ ಲೇಡಿ ಕೊಟ್ಟ ಉತ್ತರವೇನು..? ಯಾವ ರೀತಿ ಪ್ರತಿಕ್ರಿಯೆ ನೀಡಿದರು ಎಂಬ ಮಾಹಿತಿ ಲಭ್ಯವಾಗಬೇಕಿದೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ